ಆ್ಯಪ್ನಗರ

ದೇವೇಗೌಡರಿಗೆ ಕಾಂಗ್ರೆಸ್ ಬೆಂಬಲಕ್ಕೆ ಪ್ರತಿಯಾಗಿ ಪರಿಷತ್ ಚುನಾವಣೆಯಲ್ಲಿ ನಡೆಯುತ್ತಾ ಹೊಂದಾಣಿಕೆ?

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ ಹೊಂದಾಣಿಕೆ ಮಾಡಿಕೊಳ್ಳುತ್ತಾ ಎಂಬುವುದು ಕುತೂಹಲ ಕೆರಳಿಸಿದೆ.

Vijaya Karnataka Web 11 Jun 2020, 4:30 pm
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರಿಗೆ ಬೆಂಬಲ ನೀಡಿದೆ. ರಾಜ್ಯ ಕಾಂಗ್ರೆಸ್ ಮುಖಂಡರು ಬೆಂಬಲದ ಕುರಿತಾಗಿ ಅಧಿಕೃತ ಹೇಳಿಕೆ ನೀಡದೇ ಇದ್ದರೂ ಹೈಕಮಾಂಡ್ ಮಟ್ಟದಲ್ಲಿ ಆದ ನಿರ್ಧಾರದ ಹಿನ್ನೆಲೆಯಲ್ಲಿ ದೇವೇಗೌಡರು ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯಸಭೆಗೆ ಆದ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾ ಎಂಬ ಚರ್ಚೆ ಶುರುವಾಗಿದೆ.
Vijaya Karnataka Web hdk siddu


ರಾಜ್ಯಸಭೆ: ದೇವೇಗೌಡರಿಗೆ ಬೆಂಬಲ, ಹೈಕಮಾಂಡ್‌ ನಿಲುವಿಂದ ಕೈ ಪಾಳಯದಲ್ಲಿ ಗಲಿಬಿಲಿ

ಜೂನ್ 29 ರಂದು ವಿಧಾನಪರಿಷತ್ ಚುನಾವಣೆ ನಡೆಯುತ್ತದೆ. ಸದ್ಯದ ಪಕ್ಷದ ಬಲಾಬಲಗಳ ಪ್ರಕಾರ ಕಾಂಗ್ರೆಸ್‌ ಎರಡು ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಬಿಜೆಪಿ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಹಾಗೇ ಜೆಡಿಎಸ್‌ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯ. ಆದರೆ ಜೆಡಿಎಸ್‌ ಒಂದು ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟು ಕೊಡುತ್ತಾ ಎಂಬ ಪ್ರಶ್ನೆಗಳು ಉದ್ಭವವಾಗುತ್ತದೆ. ರಾಜ್ಯಸಭೆಗೆ ಕಾಂಗ್ರೆಸ್ ಹೈಕಮಾಂಡ್ ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಯಾಗಿ ಜೆಡಿಎಸ್‌ ಪರಿಷತ್‌ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬುವುದು ಸಹಜವಾಗು ಕುತೂಹಲ ಕೆರಳಿಸಿದೆ.

ಜೂನ್ 14 ರಂದು ಕಾರ್ಯಕ್ರಮ ನಡೆಯಲ್ಲ, ಸದ್ಯದಲ್ಲೇ ಪದಗ್ರಹಣ ದಿನಾಂಕ ಪ್ರಕಟ, ಡಿಕೆಶಿ

ಕಾಂಗ್ರೆಸ್‌ನಲ್ಲಿ ಎರಡು ಸ್ಥಾನಕ್ಕಾಗಿ ಸಾಕಷ್ಟು ಆಕಾಂಕ್ಷಿಗಳು ಇದ್ದಾರೆ. ಇನ್ನು ಜೆಡಿಎಸ್‌ನಲ್ಲೂ ಒಂದು ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಶರವಣ ಅವರು ಮತ್ತೆ ಪರಿಷತ್‌ಗೆ ಆಯ್ಕೆಗೊಳ್ಳುವ ತವಕದಲ್ಲಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಅಂತಮ ನಿರ್ಧಾರವನ್ನು ಎರಡು ಪಕ್ಷಗಳು ಕೈಗೊಂಡಿಲ್ಲ. ದೇವೇಗೌಡರ ಸ್ಪರ್ಧೆಗೆ ರಾಜ್ಯ ಕಾಂಗ್ರೆಸ್ ಮುಖಂಡರು ಬಹಿರಂಗ ಬೆಂಬಲ ನೀಡದ ಹಿನ್ನೆಲೆಯಲ್ಲಿ ಪರಿಷತ್ ಹೊಂದಾಣಿಗೆ ಅಸಾಧ್ಯ ಎಂಬ ಮಾತೂ ಕೇಳಿಬರುತ್ತಿದೆ. ಈ ವಿಚಾರವಾಗಿ ಎರಡೂ ಪಕ್ಷಗಳು ಮುಖಂಡರು ತುಟಿಬಿಚ್ಚುತ್ತಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ