ಆ್ಯಪ್ನಗರ

ಗೊಂದಲದ ಗೂಡಾದ ಸಂಪುಟ ಸರ್ಕಸ್: ಅಧಿವೇಶನದ ಬಳಿಕವಷ್ಟೇ ವಿಸ್ತರಣೆ?

ಸಂಪುಟ ವಿಸ್ತರಣೆ ಯಾವಾಗ ಎಂಬುವುದು ಸದ್ಯ ಉತ್ತರ ಸಿಗದ ಪ್ರಶ್ನೆಯಾಗಿದೆ. ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ಚಳಿಗಾಲದ ಅಧಿವೇಶನದ ಬಳಿಕವಷ್ಟೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

Vijaya Karnataka Web 22 Nov 2020, 3:13 pm
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಗೊಂದಲದ ಗೂಡಾಡಿ ಪರಿಣಮಿಸಿದೆ. ಇಂದು ನಾಳೆ ಎಂದು ಸದ್ದು ಮಾಡುತ್ತಿರುವ ಸಂಪುಟ ವಿಸ್ತರಣೆ ಸುದ್ದಿ ಇದೀಗ ಮತ್ತೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನದ ಬಳಕವಷ್ಟೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Vijaya Karnataka Web BS Yediyurappa


ಸಿಎಂ ಬಿಎಸ್‌ ಯಡಿಯೂರಪ್ಪ ಬುಧವಾರದಂದು ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆದರೆ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆಯನ್ನು ಸೂಚಿಸಿಲ್ಲ. ಈ ನಡುವೆ ವಿಧಾನಮಂಡಲ ಅಧಿವೇಶನದ ದಿನಾಂಕವೂ ನಿಗದಿಯಾಗಿದೆ.

ವಿಜಯೇಂದ್ರ ಪ್ರದಕ್ಷಿಣೆ.. ಮೈಸೂರು ಭಾಗದ ಮಠಗಳಿಗೆ ದಕ್ಷಿಣೆ..! ಇದಕ್ಕೆಲ್ಲಾ ಕಾರಣ ಚುನಾವಣೆ..?

ಡಿಸೆಂಬರ್‌ 7 ರಿಂದ 15 ರ ವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನದ ಬಳಿಕಷ್ಟೇ ಸಂಪುಟ ವಿಸ್ತರಣೆ ನಡೆಸುವ ಸಾಧ್ಯತೆ ಇದೆ. ಅಧಿವೇಶನವನ್ನು ನೆಪವಾಗಿಸಿಕೊಂಡು ಹೈಕಮಾಂಡ್ ಸಂಪುಟ ವಿಸ್ತರಣೆಯನ್ನು ಮುಂದಕ್ಕೊಯ್ಯುವ ಯೋಚನೆಯಲ್ಲಿದೆ ಎನ್ನಲಾಗುತ್ತಿದೆ.

ಈ ನಡುವೆ ಸಿಎಂ ಬಿಎಸ್‌ ಯಡಿಯೂರಪ್ಪ ಇನ್ನೇನು ಮೂರು ದಿನಗಳಲ್ಲಿ ಎಲ್ಲವೂ ಸುಖ್ಯಾಂತ್ಯಗೊಳ್ಳಲಿದೆ ಎಂದಿದ್ದಾರೆ. ಜೊತೆಗೆ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನಿ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಆದರೆ ಯಾರಿಗೆ ಸಂಪುಟದಲ್ಲಿ ಸ್ಥಾನ ನೀಡುವುದು ಎಂಬ ವಿಚಾರವಾಗಿ ಗೊಂದಲ ತೀವ್ರಗೊಂಡಿದೆ. ಸಚಿವಾಕಾಂಕ್ಷಿಗಳು ಹೈಕಮಾಂಡ್‌ ಮೊರೆ ಹೋಗಿದ್ದ ವಲಸೆ ಬಂದವರಿಗೆ ಸಚಿವ ಸ್ಥಾನ ನೀಡಲು ವಿರೋಧ ವ್ಯಕ್ತಡಿಸಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನದ ಬಳಿಕವಷ್ಟೇ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್‌ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಸಂಪುಟ ವಿಸ್ತರಣೆ ವಿಚಾರ ಗೊಂದಲದ ಗೂಡಾಗಿ ಪರಿಣಮಿಸಿದೆ. ಬಿಎಸ್‌ ಯಡಿಯೂರಪ್ಪ ವಿನಂತಿಗೆ ಹೈಕಮಾಂಡ್‌ ಯಾವಾಗ ಸಮ್ಮತಿ ಸೂಚಿಸಲಿದೆ ಎಂಬುವುದು ಸದ್ಯದ ಕುತೂಹಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ