ಆ್ಯಪ್ನಗರ

ಕಾಂಗ್ರೆಸ್‌ ಶಾಸಕರಿಗೆ ಮತ್ತೆ ವಿಪ್‌ ಜಾರಿ: ಕಲಾಪದಲ್ಲಿ ಹಾಜರಾಗುವಂತೆ ಸೂಚನೆ

ಕಳೆದ ಒಂದು ತಿಂಗಳಿನಿಂದ ಅತೃಪ್ತರಾಗಿ ಬಂಡಾಯದ ಬಾವುಟ ಬೀಸಿ, ಮುಂಬೈನಲ್ಲಿ ಠಿಕಾಣಿ ಹೂಡಿರುವ ನಾಲ್ವರು ಶಾಸಕರಿಗೂ ವಿಪ್‌ ಜಾರಿ ಮಾಡಲಾಗಿದೆ.

Vijaya Karnataka Web 13 Feb 2019, 8:07 am
ಬೆಂಗಳೂರು: ವಿಧಾನಸಭೆಯಲ್ಲಿ ಭಾರಿ ಸದ್ದು ಮಾಡುತ್ತಿರುವ ಆಡಿಯೋ ಟೇಪ್‌ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕರಿಗೆ ಮತ್ತೆ ವಿಪ್‌ ಜಾರಿ ಮಾಡಲಾಗಿದೆ.
Vijaya Karnataka Web ಸಿದ್ದರಾಮಯ್ಯ, ಪರಮೇಶ್ವರ್‌
ಸಿದ್ದರಾಮಯ್ಯ, ಪರಮೇಶ್ವರ್‌


ಕಲಾಪದಲ್ಲಿ ಬುಧವಾರ ಮತ್ತು ಗುರುವಾರ ಕಡ್ಡಾಯವಾಗಿ ಹಾಜರಾಗುವಂತೆ ಎಲ್ಲ ಶಾಸಕರಿಗೆ ವಿಪ್‌ ಜಾರಿ ಮಾಡಲಾಗಿದೆ.

ಬಜೆಟ್‌ ಅನುಮೋದನೆ ಪಡೆಯುವುದು ಹಾಗೂ ಪ್ರತಿಪಕ್ಷದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲ ಸದಸ್ಯರು ಹಾಜರು ಇರಬೇಕೆಂದು ವಿಪ್‌ ಜಾರಿ ಮಾಡಲಾಗಿದೆ.

ಕಳೆದ ಒಂದು ತಿಂಗಳಿನಿಂದ ಅತೃಪ್ತರಾಗಿ ಬಂಡಾಯದ ಬಾವುಟ ಬೀಸಿ, ಮುಂಬೈನಲ್ಲಿ ಠಿಕಾಣಿ ಹೂಡಿರುವ ನಾಲ್ವರು ಶಾಸಕರಿಗೂ ವಿಪ್‌ ಜಾರಿ ಮಾಡಲಾಗಿದೆ.

ಅಲ್ಲದೇ ಶಾಸಕ ಆನಂದ್‌ ಸಿಂಗ್ ಮೇಲೆ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿರುವ ಶಾಸಕ ಗಣೇಶ್‌ಗೂ ವಿಪ್‌ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ ಬಿಜೆಪಿ ಕೂಡ ತನ್ನ ಎಲ್ಲ ಶಾಸಕರಿಗೆ ವಿಪ್‌ ಜಾರಿ ಮಾಡಿದೆ.

ಮುಖ್ಯ ಸಚೇತಕ ಸುನಿಲ್‌ ಕುಮಾರ್‌ ಅವರು ಶಾಸಕರಿಗೆ ವಿಪ್‌ ಜಾರಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ