ಆ್ಯಪ್ನಗರ

ಅಭಿವೃದ್ಧಿ ಕೆಲಸ ಮಾಡೋದು ನಾವು, ವೋಟು ಹಾಕೋದು ಬಿಜೆಪಿಗೆ ಏಕೆ: ಸಿದ್ದರಾಮಯ್ಯ

ಬಿಜೆಪಿಗೆ ಜನ ವೋಟು ಹಾಕಿರುವ ಬಗ್ಗೆ ಕುಮಾರಸ್ವಾಮಿ ಪ್ರಶ್ನಿಸಿದ್ದು, ಈಗ ಸಿದ್ದರಾಮಯ್ಯ ಸರದಿ

Vijaya Karnataka Web 27 Jun 2019, 1:37 pm
ಬಾಗಲಕೋಟೆ: ಪ್ರಧಾನಿ ಮೋದಿಗೆ ವೋಟ್‌ ಹಾಕ್ತೀರಾ ಅಭಿವೃದ್ಧಿ ಕೆಲಸ ನಮಗೆ ಕೇಳುತ್ತೀರಾ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದೇ ಧಾಟಿಯಲ್ಲಿ ಪ್ರಶ್ನೆ ಕೇಳಿದ್ದಾರೆ.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿದ್ದಕ್ಕಿಂತ ಹೆಚ್ಚಾಗಿ ಬಿಜೆಪಿ ಜನ ಮತ ಹಾಕಿದ್ದಕ್ಕೆ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಾದಾಮಿ ತಾಲೂಕಿನ ಆಲೂರ ಎಸ್ ಕೆ ಗ್ರಾಮದಲ್ಲಿ ಗ್ರಾಪಂ ಕಚೇರಿ ಕಟ್ಟಡ ಭೂಮಿ ಪೂಜೆ ನೇರವೇರಿಸಿ ಸಿದ್ದರಾಮಯ್ಯ ಭಾಷಣ ಮಾಡಿದರು.


ಜನ ಬಿಜೆಪಿಗೆ ಏಕೆ ವೋಟ್‌ ಹಾಕ್ತಾರೆ ಎಂದು ಗೊತ್ತಾಗುತ್ತಿಲ್ಲ ಎಂದರು.

ಸ್ವಕ್ಷೇತ್ರ ಬಾದಾಮಿಯಲ್ಲಿಯೇ ಬಿಜೆಪಿಗೆ ಲೀಡ್‌ ಬಂದಿದ್ದ ಸಿದ್ದರಾಮಯ್ಯ ಅಸಮಾಧಾನಕ್ಕೆ ಕಾರಣವಾಯಿತು.

ಬಾದಾಮಿ ಕ್ಷೇತ್ರದಲ್ಲಿ ನಮಗೆ ಲೀಡ್ ಬರುತ್ತೇ ಅಂತ ಅಂದುಕೊಂಡಿದ್ದೆ. ಆದ್ರೆ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿಗೆ 9 ಸಾವಿರ ಲೀಡ್ ಆಗಿದೆ. ನಾನು ಬಾದಾಮಿ ಶಾಸಕನಾದ ಮೇಲೆ 1300 ಕೋಟಿ ರೂ. ಅನುದಾನ ತಂದಿದ್ದೇನೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲೀಡ್ ಬಂದಿದೆ. ಇದು ಬೇಸರ ತರಿಸಿದೆ ಎಂದರು.

ಜನ ಏನು ನೋಡಿ ಬಿಜೆಪಿ ಗೆ ಓಟ್ ಹಾಕ್ತಾರೆ ನನಗೆ ಗೊತ್ತಾಗುತ್ತಿಲ್ಲ. ಕೆಲಸ ಮಾಡಿದವರು ನಾವು, ವೋಟ್ ಬಿಜೆಪಿಗೆ ಹಾಕ್ತಾರೆ, ಯಾಕೆ? ಪಂಚಾಯಿತಿಗೆ ಅನುದಾನ, ಅನ್ನಭಾಗ್ಯ, ಶೂಭಾಗ್ಯ ತಂದಿದ್ದು ನಾವು, ವಿದ್ಯಾ ಸಿರಿ ತಂದಿದ್ದು ನಾವು. ವೋಟು ಮಾತ್ರ ಬಿಜೆಪಿಗೆ ಏಕೆ ಎಂದು ಮತದಾರರನ್ನೇ ಸಿದ್ದರಾಮಯ್ಯ ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ