ಆ್ಯಪ್ನಗರ

Siddaramaiah vs CT Ravi:'ಮುಸ್ಲಿಂ ಏರಿಯಾ ಅಂದ್ರೆ ಅದೇನು ಪಾಕಿಸ್ತಾನನ?'-ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ

Savarkars photo: ಸಾವರ್ಕರ್‌ ಫೋಟೋ ಹಾಕುವುದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಅವರು, 'ಮುಸ್ಲಿಂ ಏರಿಯಾ ಅಂದ್ರೆ ಅದೇನು ಪಾಕಿಸ್ತಾನನ? ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ರೆ ಏನು ತಪ್ಪು?' ಎಂದು ಪ್ರಶ್ನಿಸಿದ್ದಾರೆ. 'ಇಂಥ ಆಲೋಚನೆಗಳಿಂದ ದೇಶ ಉಳಿಸಲು ಸಾಧ್ಯವೇ? ಇಂತಹ ಆಲೋಚನೆಗಳಿಂದಲೇ ಭಾರತ ವಿಭಜನೆ ಆಗಿದ್ದು. ಈ ಆಲೋಚನೆಗಳಿಗೆ ಕಾಂಗ್ರೆಸ್‌ ಮತ್ತೆ ಕುಮ್ಮಕ್ಕು ಕೊಡುತ್ತಿದೆ. ಇದು ದೇಶಕ್ಕೆ ಅಪಾಯಕಾರಿ' ಎಂದು ಕಾಂಗ್ರೆಸ್‌ ವಿರುದ್ಧ ಗುಡುಗಿದರು.

Edited byಹೇಮಂತ್ ಕುಮಾರ್ ಎಸ್ | Vijaya Karnataka Web 19 Aug 2022, 4:06 pm

ಹೈಲೈಟ್ಸ್‌:

  • ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ರೆ ಏನು ತಪ್ಪು?
  • ಇಂತಹ ಆಲೋಚನೆಗಳಿಂದಲೇ ಭಾರತ ವಿಭಜನೆ ಆಗಿದ್ದು ಎಂದ ಸಿ.ಟಿ ರವಿ
  • ಶಿವಮೊಗ್ಗ ಗಲಭೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹೇಳಿಕೆಗೆ ವಿರೋಧ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ct ravi
ಸಿ.ಟಿ.ರವಿ
ಪಣಜಿ: ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದು ಎನ್ನುವ ಆಲೋಚನೆ ದೇಶದ ಹಿತದೃಷ್ಟಿಯಿಂದ ಸಮಂಜಸವಲ್ಲ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾರೆ.
ಸಾವರ್ಕರ್‌ ಫೋಟೋ ಹಾಕುವುದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಅವರು, 'ಮುಸ್ಲಿಂ ಏರಿಯಾ ಅಂದ್ರೆ ಅದೇನು ಪಾಕಿಸ್ತಾನನ? ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ರೆ ಏನು ತಪ್ಪು?' ಎಂದು ಪ್ರಶ್ನಿಸಿದ್ದಾರೆ.
BS Yediyurappa | ಯಾರು ಯಾರನ್ನು ಎಲ್ಲೆಲ್ಲಿ ಕಟ್ಟಿಹಾಕಬೇಕು ಎಂಬುದನ್ನು ಬಿಎಸ್‌ವೈ ನಿರ್ಧಾರ ಮಾಡುತ್ತಾರೆ: ಸಿ.ಟಿ.ರವಿ
'ಇಂಥ ಆಲೋಚನೆಗಳಿಂದ ದೇಶ ಉಳಿಸಲು ಸಾಧ್ಯವೇ? ಇಂತಹ ಆಲೋಚನೆಗಳಿಂದಲೇ ಭಾರತ ವಿಭಜನೆ ಆಗಿದ್ದು. ಈ ಆಲೋಚನೆಗಳಿಗೆ ಕಾಂಗ್ರೆಸ್‌ ಮತ್ತೆ ಕುಮ್ಮಕ್ಕು ಕೊಡುತ್ತಿದೆ. ಇದು ದೇಶಕ್ಕೆ ಅಪಾಯಕಾರಿ' ಎಂದು ಕಾಂಗ್ರೆಸ್‌ ವಿರುದ್ಧ ಗುಡುಗಿದರು.

'ನಾಳೆ, ಮುಸ್ಲಿಂ ಏರಿಯಾದಲ್ಲಿ ತ್ರಿವರ್ಣ ಧ್ವಜವನ್ನು ಏಕೆ ಹಾರಿಸಿದಿರಿ ಅಂತ ಕೇಳುವ ಪ್ರಸಂಗ ಬರಬಹುದು' ಎಂದರು.
BS Yediyurappa | ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಬಿಎಸ್‌ವೈಗೆ ಸ್ಥಾನ, ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು: ಸಿ.ಟಿ ರವಿ
ಜಿಹಾದಿ ಮನಸ್ಥಿತಿಗೆ ಹೋಲಿಕೆ:

ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಭೆ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಸ್ಲಿಮರ ಏರಿಯಾಗೆ ಬಂದು ಸಾವರ್ಕರ್ ಫ್ಲೆಕ್ಸ್ ಹಾಕುವ ಅಗತ್ಯ ಏನಿತ್ತು? ಎಂದು ಪಶ್ನಿಸಿದ್ದರು. ಇದಕ್ಕೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಮುಸ್ಲಿಮರ ಏರಿಯಾ ಎಂದರೆ ಅರ್ಥ ಏನು ಎಂದು ಪ್ರಶ್ನೆ ಮಾಡಿದ್ದಾರೆ.
Egg thrown at Siddaramaiah's Car: ಬಿಜೆಪಿಯಿಂದಲೇ ಖಂಡನೆ; ಕಾಂಗ್ರೆಸ್ ನಿಂದ ಪ್ರತಿಭಟನೆ!
"ಮುಸ್ಲಿಂ ಪ್ರದೇಶ" ಎಂಬುದರ ಅರ್ಥವೇನು? ಪದೇ ಪದೇ ಜಿಹಾದಿ ಮನಸ್ಥಿತಿಯನ್ನು ಪ್ರದರ್ಶಿಸುವ ಮೂಲಕ ನೀವು ಅಮಾಯಕರನ್ನು ಕೊಲ್ಲುವ ಜಿಹಾದಿಗಳಿಗಿಂತ ಹೆಚ್ಚು ಅಪಾಯಕಾರಿ ಎಂದು ಸಾಬೀತುಪಡಿಸುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?

ಶಿವಮೊಗ್ಗ ಗಲಭೆಯ ಹಿಂದೆ ಕಾಂಗ್ರೆಸ್‌ನವರ ಕೈವಾಡ ಇದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, ಈ ಬಿಜೆಪಿಯವರಿಗೆ ಕಾಮಾಲೆ ರೋಗ ಬಂದಿದೆ. ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಎಂದು ಆರೋಪ ಮಾಡುವುದು ಹಾಗೂ ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು.

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಿದ್ದಾರೆ. ಹಾಕಲಿ ಬೇಡ ಅನ್ನಲ್ಲ. ಆದ್ರೆ ಟಿಪ್ಪು ಫೋಟೋ ತೆಗೀತಾರೆ. ಹೀಗೆ ಮಾಡಿದ್ರೆ ಗಲಭೆ ಆಗಲ್ವಾ..? ಎಂದು ಪ್ರಶ್ನಿಸಿದ್ದರು. ತಪ್ಪು ಅವರು ಮಾಡಿ ಕಾಂಗ್ರೆಸ್ ಮೇಲೆ ಹಾಕ್ತಾರೆ. ಮಗುವನ್ನೂ ಚಿವುಟುತ್ತಾರೆ ತೊಟ್ಟಿಲು ತೂಗುತ್ತಾರೆ. ಶಿವಮೊಗ್ಗ ಘಟನೆಯಲ್ಲಿ ಎಸ್‍ಡಿಪಿಐ ಇದ್ದರೆ ಕ್ರಮ ತೆಗೆದುಕೊಳ್ಳಿ. ಸರ್ಕಾರ ನಿಮ್ಮದೇ ಇದೆ. ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳು ಸಾಮರಸ್ಯ ಹಾಳು ಮಾಡುತ್ತಿದ್ದಾರೆ ಅಂತ ನಿಮ್ಮ ಬಳಿ ದಾಖಲೆ ಇದ್ರೆ ಕ್ರಮ ತೆಗೆದುಕೊಳ್ಳಿ ಎಂದು ಹೇಳಿದ್ದರು.
‘ವಿಪಕ್ಷ ನಾಯಕರಿಗೆ ತನ್ನದೇ ಆದ ಗೌರವ ಇದೆ’: ಸಿದ್ದರಾಮಯ್ಯ ಕಾರ್‌ಗೆ ಮೊಟ್ಟೆ ಎಸೆದ ಕೃತ್ಯ ಖಂಡಿಸಿದ ಸಿಎಂ
ನಾನು ನಿಮ್ಮ ಸೇವಕ ಎಂದು ಬ್ರಿಟಿಷರಿಗೆ ಸಾವರ್ಕರ್‌ ಹೇಳಿದ್ದರು. ಹಾಗಿದ್ದರೆ ಅವರು ದೇಶ ಪ್ರೇಮಿ, ಸ್ವಾತಂತ್ರ್ಯ ಹೋರಾಟಗಾರ ಆಗುವುದು ಹೇಗೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ:

ಅತಿವೃಷ್ಟಿಯಿಂದ ಹಾನಿಗೊಳಗಾದ ಕೊಡಗು ಜಿಲ್ಲೆಯ ಪ್ರದೇಶಗಳಿಗೆ ಗುರುವಾರ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈ ವೇಳೆ ಸಾವರ್ಕರ್‌ ಫ್ಲೆಕ್ಸ್ ವಿವಾದದ ಕುರಿತಾಗಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಸಿದ್ದರಾಮಯ್ಯ ಗೋಬ್ಯಾಕ್ ಎಂದು ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರು. ಈ ವೇಳೆ ಕಿಡಿಗೇಡಿಗಳು ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದರು.
Egg thrown Case: ಆಗಸ್ಟ್ 26 ರಂದು ಬಿಜೆಪಿ ವಿರುದ್ಧ ಕೊಡಗಿನಲ್ಲಿ ಹೋರಾಟಕ್ಕೆ 'ಕೈ' ಪ್ಲ್ಯಾನ್
ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡಲು ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಆಗಸ್ಟ್ 26 ರಂದು ಕೊಡಗಿನಲ್ಲೇ ದೊಡ್ಡ ಮಟ್ಟದ ಹೋರಾಟ ರೂಪಿಸಲು ಸಿದ್ಧತೆ ಕೈಗೊಂಡಿದೆ.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ