ಆ್ಯಪ್ನಗರ

ರಾಜಕೀಯ ಪ್ರೇರಿತ ದಾಳಿಯೇ ಎಂಬುದು ಗೊತ್ತಿಲ್ಲ, ಅಧಿಕಾರಿಗಳಿಗೆ ಸಹಕರಿಸುತ್ತೇನೆ: ಜಿ. ಪರಮೇಶ್ವರ್

ಸಿದ್ದಾರ್ಥ ಮೆಡಿಕಲ್ ಕಾಲೇಜು ಮತ್ತು ಆರ್.ಎಲ್ ಜಾಲಪ್ಪ‌ ಮೆಡಿಕಲ್ ಕಾಲೇಜು ಪ್ರವೇಶಕ್ಕೆ ಮ್ಯಾನೇಜ್‌ಮೆಂಟ್ ಕೋಟಾ ಅಡಿ ಆಗಿರುವ ಆಡ್ಮಿಷನ್ ಗಳಿಗೆ ಅಪಾರ ಪ್ರಮಾಣದ ಹಣವನ್ನು ನಗದು ರೂಪದಲ್ಲಿ ಪಾವತಿ ಮಾಡಲಾಗಿದೆ. ಈ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ‌ ಎಂದು ತಿಳಿದು ಬಂದಿದೆ.

Vijaya Karnataka Web 10 Oct 2019, 12:45 pm
ಬೆಂಗಳೂರು: ತೆರಿಗೆ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತುಮಕೂರಿನ ಕೊರಟಗೆರೆಯಿಂದ ಬೆಂಗಳೂರಿನಲ್ಲಿರುವ ಸದಾಶಿವನಗರದ ನಿವಾಸಕ್ಕೆ ಕರೆತಂದರು.
Vijaya Karnataka Web G Parameshwar


ಬೆಳಗ್ಗೆ ತಮ್ಮ ಕ್ಷೇತ್ರದಲ್ಲಿ ಕಾರ್ಯಕ್ರಮವೊಂದರ ಪೂಜೆಯಲ್ಲಿ ತೊಡಗಿದ್ದ ಪರಮೇಶ್ವರ್ ಇದ್ದ ಸ್ಥಳಕ್ಕೆ ತೆರಳಿದ ಐಟಿ ಅಧಿಕಾರಿಗಳು ದಾಳಿ ಮಾಹಿತಿ ನೀಡಿದರು. ನಂತರ ಇನ್ಸಪೆಕ್ಷನ್ ಬಂಗಲೆಗೆ ಕರೆದೊಯ್ದು ಕೆಲ ಕಾಲ ವಿಚಾರಣೆ ನಡೆಸಿದರು. ನಂತರ ನಮ್ಮೊಂದಿಗೆ ಬನ್ನಿ ಎಂದು ಬೆಂಗಳೂರಿಗೆ ಕರೆತಂದಿದ್ದಾರೆ.

ಡಿಕೆಶಿ ಆಯ್ತು, ಮತ್ತೀಗ ಪರಮೇಶ್ವರ್: ಮಾಜಿ ಡಿಸಿಎಂ ಒಡೆತನದ ಶಿಕ್ಷಣ ಸಂಸ್ಥೆಗಳು, ಕಚೇರಿ, ನಿವಾಸಗಳ ಮೇಲೆ ಐಟಿ ದಾಳಿ

ದಾಳಿ ಕುರಿತು ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪರಮೇಶ್ವರ್, "ಐಟಿ ಅಧಿಕಾರಿಗಳು ಏನೇನು ಕೇಳುತ್ತಾರೆ ಅದಕ್ಕೆ ಉತ್ತರ ನೀಡುತ್ತೇನೆ. ನಮ್ಮ ಶಿಕ್ಷಣ ಸಂಸ್ಥೆ ತಂದೆಯವರು ಸ್ಥಾಪಿಸಿದ್ದು. ಐವತ್ತಾರು ವರ್ಷಗಳಿಂದ ನಡೆಯುತ್ತಿದೆ. ಕಾಲಕಾಲಕ್ಕೆ ಆದಾಯ ತೆರಿಗೆ ರಿಟರ್ನ್ ಫೈಲ್ ಮಾಡುತ್ತಿದ್ದೇವೆ. ಐಟಿ ಅಧಿಕಾರಿಗಳು ನಮ್ಮ ಶಿಕ್ಷಣ ಸಂಸ್ಥೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಬಂದಿದ್ದಾರೆ ಎಂದು ನನಗೂ ಗೊತ್ತಿಲ್ಲ. ತಂದೆ ಸ್ಥಾಪಿಸಿದ ಶಿಕ್ಷಣ ಸಂಸ್ಥೆಗಳು ಬಿಟ್ಟರೆ ಬೇರೆ ಯಾವುದೇ ವ್ಯವಹಾರಗಳು ಇಲ್ಲ" ಎಂದರು.

ರಾಜಕೀಯ ಪ್ರೇರಿತ ದಾಳಿಯೇ ಎಂಬ ಪತ್ರಕರ್ತರ ಪ್ರಶ್ನೆಗೆ, ಉತ್ತರ ನೀಡಲು ನಿರಾಕರಿಸಿದ ಪರಮೇಶ್ವರ್ "ಗೊತ್ತಿಲ್ಲ ನೋಡಬೇಕು, ನೋಡೋಣ", ಎಂದಷ್ಟೇ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ