ಆ್ಯಪ್ನಗರ

ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಚರ್ಚಿಸಿ ತೀರ್ಮಾನ: ಡಿಕೆ ಶಿವಕುಮಾರ್‌

ಕೊರೊನಾ ಹೆಸರಿನಲ್ಲಿ ಸರಕಾರ ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದು, ಈ ವಿಷಯದಲ್ಲಿ ನಮ್ಮ ಸಲಹೆ ಕೇಳಿಲ್ಲ. ಸ್ವಯಂ ನಿರ್ಧಾರ ತೆಗೆದುಕೊಂಡವರು, ಈಗ ಪರಿಸ್ಥಿತಿ ಕೈಮೀರಿದ ಹಿನ್ನೆಲೆ ಸರ್ವಪಕ್ಷ ಸಭೆ ಕರೆದಿದ್ದಾರೆಂಬ ಮಾಹಿತಿ ಇದೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Vijaya Karnataka Web 14 Apr 2021, 8:55 pm
ಬೆಂಗಳೂರು: ಕೊರೊನಾ ವಿಚಾರವಾಗಿ ಏ.18ರಂದು ಸರಕಾರ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವ ಕುರಿತು ನಾಯಕರ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ತಿಳಿಸಿದರು.
Vijaya Karnataka Web DK Shivakumar


ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ''ಕೊರೊನಾ ಹೆಸರಿನಲ್ಲಿ ಸರಕಾರ ಸಾಕಷ್ಟು ಭ್ರಷ್ಟಾಚಾರ ನಡೆಸಿದೆ. ಈ ವಿಷಯದಲ್ಲಿ ನಮ್ಮ ಸಲಹೆ ಕೇಳಿಲ್ಲ. ಸ್ವಯಂ ನಿರ್ಧಾರ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಕೈಮೀರಿದ ಹಿನ್ನೆಲೆ ಸರ್ವಪಕ್ಷ ಸಭೆ ಕರೆದಿದ್ದಾರೆಂಬ ಮಾಹಿತಿ ಇದೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತ ಮಾಹಿತಿ ರವಾನಿಸಿಲ್ಲ,'' ಎಂದರು.

ಸರಕಾರಕ್ಕೆ ಸಲಹೆ

ಲಸಿಕೆ ರಫ್ತು ನಿಲ್ಲಿಸಿ ದೇಶದ ಜನರಿಗೆ ಮೊದಲು ಲಸಿಕೆ ನೀಡಲಿ ಎಂದು ಡಿಕೆಶಿ ಸಲಹೆ ನೀಡಿದರು. ಲಾಕ್‌ಡೌನ್‌ ಅಗತ್ಯವಿಲ್ಲ. ಮುಂಜಾಗ್ರತೆ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಲಿ. ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕೇಂದ್ರವು 20 ಲಕ್ಷ ಕೋಟಿ ನೀಡುವುದಾಗಿ ತಿಳಿಸಿತ್ತು. ರಾಜ್ಯ ಸರಕಾರ 1,600 ಕೋಟಿ ಪ್ಯಾಕೇಜ್‌ ಎಂದರು. ಇದರಲ್ಲಿ ಯಾವುದು ಸರಿ? ಸೂಕ್ತ ಪ್ಯಾಕೇಜ್‌ ನೀಡಿ ಜನರ ಜೀವನ ಮತ್ತು ಜೀವ ಉಳಿಸುವಂತೆ ಸಲಹೆ ನೀಡಿದರು.

ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್ ಅವಷ್ಯಕತೆ ಇಲ್ಲ, ಡಿಕೆ ಶಿವಕುಮಾರ್
ಕಷ್ಟದ ಸ್ಥಿತಿ

ಕಂಪನಿಗಳು ಮತ್ತು ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬ್ಯಾಂಕ್‌ ಸಾಲದ 6 ರಿಂದ ಒಂದು ವರ್ಷದ ಅವಧಿಯ ಬಡ್ಡಿ ಮನ್ನಾ ಆಗಿಲ್ಲ. ಹೋಟೆಲ್‌ಗಳ ಸ್ಥಿತಿಯೂ ಗಂಭೀರವಾಗಿದೆ. ಯಾರಿಗೂ ಪರಿಹಾರ ತಲುಪಿಲ್ಲ. ಹೀಗಿದ್ದಲ್ಲಿ ಸರಕಾರದ ಹಣ ಎಲ್ಲಿ ಹೋಗುತ್ತಿದೆ ಎಂಬುದೇ ಅರಿವಿಗೆ ಬರುತ್ತಿಲ್ಲ. ಈ ನಡುವೆ ರಸಗೊಬ್ಬರ ಬೆಲೆ, ಸೀಮೆಂಟ್‌, ಕಬ್ಬಿಣ ಬೆಲೆ ಹೆಚ್ಚಾಗಿದೆ. ಸಾಮಾನ್ಯ ಜನರ ಕಷ್ಟದ ಸ್ಥಿತಿಯನ್ನು ಸರಕಾರ ಅರಿತುಕೊಳ್ಳಬೇಕು ಎಂದು ಡಿಕೆಶಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ