ಆ್ಯಪ್ನಗರ

ಮೂರು ನಾಲ್ಕು ದಿನದಲ್ಲಿ ಬಿಜೆಪಿ ಸರಕಾರ ರಚನೆ, ಜನ ಮೆಚ್ಚುವ ಆಡಳಿತ: ಯಡಿಯೂರಪ್ಪ

ಕರ್ನಾಟಕ ರಾಜಕೀಯ ನಾಟಕಕ್ಕೆ ಇಂಟರ್‌ವೆಲ್ ಆಗಿದೆ. ಗುರುವಾರದ ವಿಶ್ವಾಸಮತ ಯಾಚನೆ ಪರೀಕ್ಷೆಯ ಬಗ್ಗೆ ಇಡೀ ದೇಶವೇ ಕುತೂಹಲದಿಂದ ನೋಡುತ್ತಿದೆ.

Vijaya Karnataka Web 15 Jul 2019, 10:15 pm
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಗುರುವಾರ ಪತನಗೊಳ್ಳಲಿದೆ. ಆ ನಂತರ ಬಿಜೆಪಿ ಸರಕಾರ ರಚನೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ಬಿಎಸ್‌ವೈ
ಬಿಎಸ್‌ವೈ


ವಿಧಾನಸಭಾ ಕಲಾಪದ ನಂತರ ಬಿಜೆಪಿ ಶಾಸಕರ ತಂಗಿದ್ದ ರೆಸಾರ್ಟ್‌ಗೆ ತೆರಳಿದ ಯಡಿಯೂರಪ್ಪ, ಸುದ್ದಿಗಾರರೊಂದಿಗೆ ಮಾತನಾಡಿದರು.

ಗುರುವಾರ ವಿಶ್ವಾಸಮತ ಯಾಚನೆ ಮಾಡುವುದಾಗಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಆದರೆ ಅವರಿಗೆ ಬಹುಮತ ಇಲ್ಲ ಎಂಬುದು ಗುರುವಾರ ಸ್ಪಷ್ಟವಾಗಲಿದೆ. ಅಲ್ಲಿಯವರೆಗೆ ಕಾದು ನೋಡಿ ಎಂದರು.

ಈಗ ರೆಸಾರ್ಟ್‌ನಲ್ಲಿ ಎಲ್ಲ ಶಾಸಕರ ಜತೆ ಸಮಾಲೋಚನೆ ನಡೆಸಲಾಗುವುದು. ಬಿಜೆಪಿಗೆ ರಿವರ್ಸ್‌ ಆಪರೇಷನ್‌ ಭಯವೇ ಇಲ್ಲ. ಸೋಮವಾರ ರಾತ್ರಿ ಶಾಸಕರೊಂದಿಗೆ ರೆಸಾರ್ಟ್‌ನಲ್ಲಿ ಕಳೆಯುತ್ತೇನೆ ಎಂದು ಬಿಎಸ್‌ ಯಡಿಯೂರಪ್ಪ ತಿಳಿಸಿದರು.

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಗೆ ಬಹುಮತ ಇಲ್ಲ. ಗುರುವಾರದಂದು ವಿದಾಯ ಭಾಷಣ ಮಾಡಿ ಹೋಗುತ್ತಾರೆ ಎಂದು ಬಿಎಸ್‌ವೈ ಹೇಳಿದರು.

ಈ ಎಲ್ಲ ಬೆಳವಣಿಗೆಗಳ ನಡುವೆ ಬಿಜೆಪಿ ಶಾಸಕರಿಗೆ ವಿಪ್‌ ಜಾರಿ ಮಾಡಲಾಗಿದೆ. ಗುರುವಾರ ನಡೆಯಲಿರುವ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಸರಕಾರದ ವಿರುದ್ಧ ಮತ ಚಲಾಯಿಸಬೇಕು ಶಾಸಕರಿಗೆ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ