ಆ್ಯಪ್ನಗರ

ಮಾತು ಕೊಟ್ಟವರಿಗೆಲ್ಲ ಸಚಿವ ಸ್ಥಾನ: ಯಡಿಯೂರಪ್ಪ ಭರವಸೆ

ಕರ್ನಾಟಕದ 15 ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿರುವುದು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಬಹುಮತ ದಕ್ಕಿಸಿಕೊಟ್ಟಿದೆ.

Vijaya Karnataka Web 9 Dec 2019, 1:23 pm
ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳ ಫಲಿತಾಂಶದಲ್ಲಿ ಬಿಜೆಪಿ 12 ಸ್ಥಾನ ಖಚಿತವಾಗಿರುವುದು ಖುಷಿ ತಂದಿದೆ. ಇದಕ್ಕೆ ಮತದಾರರು, ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಚುನಾವಣೆ ಫಲಿತಾಂಶ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಚುನಾವಣೆ ಫಲಿತಾಂಶ ಬಂದಾಗಿದೆ. ಮತದಾರರು ಬಿಜೆಪಿ ಪರ ಇದ್ದಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.

ಮಾತು ಕೊಟ್ಟವರಿಗೆಲ್ಲ ಸಚಿವ ಸ್ಥಾನ ನೀಡಲಾಗುವುದು. ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ಅದನ್ನು ಪಾಲಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದರು.

ಒಟ್ಟು 15 ವಿಧಾನಸಭಾ ಕ್ಷೇತ್ರಗಳಲ್ಲಿ ನಾವಂದು ಕೊಂಡಂತೆ 12 ಸ್ಥಾನ ಗಳಿಸಿದ್ದೇವೆ. ಇನ್ನು ಒಂದೆರಡು ಸ್ಥಾನ ಬರಬೇಕಾಗಿತ್ತು. ಈಗ ಸರಕಾರ ಸುಭದ್ರವಾಗಿದೆ ಎಂದು ತಿಳಿಸಿದರು.

ಮತದಾರರಿಗೆ ಬಿಜೆಪಿ ಮೇಲೆ ಸಾಕಷ್ಟು ವಿಶ್ವಾಸ, ಭರವಸೆ ಇದೆ. ಇದು ಮತ್ತೊಮ್ಮೆ ಸಾಬೀತಾಗಿದೆ. ಇನ್ನು ಮುಂದಿನ ವರ್ಷಗಳಲ್ಲಿ ಉತ್ತಮ ಆಡಳಿತ ನೀಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ತಿಳಿಸಿದರು.

ಮುಂದಿನ ಮೂರುವರೆ ವರ್ಷಗಳ ಕಾಲ ಅಭಿವೃದ್ಧಿಪರ ಆಡಳಿತ ನೀಡುತ್ತೇವೆ. ಇದರಿಂದ ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗಳಿಸುತ್ತದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ