ಆ್ಯಪ್ನಗರ

ಆಗದಿದ್ರೆ ಬಿಟ್ಕೊಡಿ, ನಾವು ಸರಕಾರ ಮಾಡ್ತೀವಿ: ಕಾಂಗ್ರೆಸ್, ಜೆಡಿಎಸ್‌ಗೆ ಯಡಿಯೂರಪ್ಪ ಸವಾಲು

ಇಂದಿನಿಂದ ಮೂರು ದಿನ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇನೆ. ಜಿಂದಾಲ್‌ಗೆ ಕೊಡುತ್ತಿರುವ ಜಮೀನಲ್ಲಿ ಉತ್ತಮ ಖನಿಜಗಳಿವೆ. ಈಗಾಗಲೇ ಜಿಂದಾಲ್‌ಗೆ ಕೊಟ್ಟಿರುವ ಭೂಮಿ ಸಫೀಶಿಯಂಟ್ ಆಗಿದೆ, ಮತ್ತೆ ಜಮೀನು ಕೊಡುವ ಅವಶ್ಯಕತೆಯಿಲ್ಲ. ಬೇರೆ ಇಂಡಸ್ಟ್ರಿಗಳಿಗೆ ಪ್ರೋತ್ಸಾಹ ಮಾಡಬಹುದು

Vijaya Karnataka Web 7 Jun 2019, 4:37 pm
ಹುಬ್ಬಳ್ಳಿ: ಸರಕಾರ ನಡೆಸಲು ಆಗುವುದಾದರೆ ಮುಂದುವರಿಸಿ, ಆಗದಿದ್ದರೆ ನಮಗೆ ಬಿಟ್ಟುಕೊಟ್ಟು ಬಿಡಿ. ನಾವು ನೋಡಿಕೊಳ್ಳುತ್ತೇವೆ....
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಇದು ಕಾಂಗ್ರೆಸ್‌-ಜೆಡಿಎಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಎಸೆದಿರುವ ಸವಾಲು

ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು.

ಕುಮಾರಸ್ವಾಮಿಯವರ ಮಗ ಯಾವುದೇ ಸಂದರ್ಭದಲ್ಲಾದರೂ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಿದ್ದಾನೆ. ನಾನು ಹೇಳುತ್ತೇನೆ ಯಾವುದೇ ಕಾರಣಕ್ಕೂ ಚುನಾವಣೆ ನಡೆಯಲ್ಲ. ಅಧಿಕಾರ‌‌ ಮಾಡಲು ಕೈಲಾದರೆ ಮುಂದುವರಿಸಿ. ಆಗದಿದ್ದರೆ ಬಿಟ್ಟು ಹೋಗಲಿ ಎಂದು ಬಿಎಸ್‌ವೈ ಸವಾಲು ಹಾಕಿದರು.

ಸರಕಾರವನ್ನು ನಮಗೆ ಬಿಟ್ಟು ಕೊಡಲಿ ನಾವು ಅಧಿಕಾರ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆಗೆ ಹೋಗುವ ಪ್ರಶ್ನೆಯಿಲ್ಲ. ನಾವು ಅದನ್ನು ಒಪ್ಪಲ್ಲ. ಜನರ ಬಳಿ ಹೋಗಲು ಇನ್ನೂ ಐದುವರ್ಷ ಬಾಕಿಯಿದೆ. ಈ ಸರಕಾರ ಬಹಳ ದಿನ ಇರುತ್ತೆ ಅಂತಾ ಯಾರಿಗೂ ವಿಶ್ವಾಸವಿಲ್ಲ ಎಂದರು.

ಕೇಂದ್ರ ಸಂಪುಟದಲ್ಲಿ ಲಿಂಗಾಯತರಿಗೆ ಅವಕಾಶ ಕೊಡುವುದು ಪ್ರಧಾನಿಗಳಿಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಜಯಗಳಿಸಿರುವ ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಕುರಿತು ನಾವು ಅಪ್ರೋಚ್ ಮಾಡಿಲ್ಲ ಎಂದು ತಿಳಿಸಿದರು.

ಇಂದಿನಿಂದ ಮೂರು ದಿನ ಬರ ಅಧ್ಯಯನ ಪ್ರವಾಸ ಮಾಡುತ್ತಿದ್ದೇನೆ. ಜಿಂದಾಲ್‌ಗೆ ಕೊಡುತ್ತಿರುವ ಜಮೀನಲ್ಲಿ ಉತ್ತಮ ಖನಿಜಗಳಿವೆ. ಈಗಾಗಲೇ ಜಿಂದಾಲ್‌ಗೆ ಕೊಟ್ಟಿರುವ ಭೂಮಿ ಸಫೀಶಿಯಂಟ್ ಆಗಿದೆ, ಮತ್ತೆ ಜಮೀನು ಕೊಡುವ ಅವಶ್ಯಕತೆಯಿಲ್ಲ. ಬೇರೆ ಇಂಡಸ್ಟ್ರಿಗಳಿಗೆ ಪ್ರೋತ್ಸಾಹ ಮಾಡಬಹುದು ಎಂದು ಯಡಿಯೂರಪ್ಪ ಹೇಳಿದರು.

ಯಾವುದೋ ಒಂದು ಕಂಪನಿಗೆ ಫೇವರ್ ಮಾಡಿ ವ್ಯವಹಾರ ಕುದುರಿಸಿಕೊಳ್ಳಲು ಕುಮಾರಸ್ವಾಮಿ ಹೊರಟಿದ್ದಾರೆ. ಕುಮಾರಸ್ಚಾಮಿ ನಿರ್ಧಾರ ಖಂಡಿಸಿ ಮೂರು ದಿನ ಧರಣಿ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ತಿಳಿಸಿದರು.

ಮುಖ್ಯಮಂತ್ರಿ ಗ್ರಾಮ ವಾಸ್ತವ್ಯಕ್ಕೆ ಅರ್ಥವಿಲ್ಲ. ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ. ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ. ಜನರ ಗಮನ ಬೇರೆಡೆ ಸೆಳೆಯುವ ರಾಜಕೀಯ ದೊಂಬರಾಟವಿದು. ರಾಜ್ಯದ ಜನ ಇದಕ್ಕೆಲ್ಲ ಬೆಲೆ ಕೊಡಲ್ಲ. ಕಾಂಗ್ರೆಸ್‌, ಜೆಡಿಎಸ್ ನಾಯಕರು ಜನರನ್ನು ವಂಚಿಸಿ ಪರಸ್ಪರ ಕಚ್ಚಾಟ, ಬಡಿದಾಟದಲ್ಲಿ ತೊಡಗಿದ್ದಾರೆ ಎಂದು ಯಡಿಯೂರಪ್ಪ ಗುಡುಗಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ