ಆ್ಯಪ್ನಗರ

ಸರ್ವರಿಗೂ ಸೂರು ಕಲ್ಪಿಸಲು ರಾಜ್ಯ ಸರಕಾರ ಬದ್ಧ: ಯಡಿಯೂರಪ್ಪ

ಕೇಂದ್ರ ಸರಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ರಾಜ್ಯದಲ್ಲಿಯೂ ಎಲ್ಲರಿಗೂ ಸೂರು ಒದಗಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

Vijaya Karnataka Web 25 Sep 2019, 9:07 pm
ಬೆಂಗಳೂರು: ಸ್ವಂತ ಸೂರು ಹೊಂದುವುದು ಪ್ರತಿಯೊಬ್ಬರ ಕನಸಾಗಿದೆ. ಈ ಕನಸನ್ನು ನನಸಾಗಿಸುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಬೆಂಗಳೂರಿನಲ್ಲಿಂದು ನಡೆದ ಕರ್ನಾಟಕ ಬಿಲ್ಡರ್ ಅಂಡ್ ಡೆವಲಪರ್ಸ್ ಸಮಾವೇಶದಲ್ಲಿ ಯಡಿಯೂರಪ್ಪ ಮಾತನಾಡಿದರು.

ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 2022 ರೊಳಗೆ ಸರ್ವರಿಗೂ ಸೂರು ಕಲ್ಪಿಸುವ ಗುರಿ ಹೊಂದಿದೆ. ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಲಾಗುತ್ತಿದೆ ಎಂದರು.

ಆರ್ಥಿಕ ಸಾಮರ್ಥ್ಯಕ್ಕನುಗುಣವಾಗಿ ಎಲ್ಲರೂ ಮನೆ ಹೊಂದಬೇಕು. ಇದಕ್ಕಾಗಿ ಸರಕಾರ ಕೂಡ ಸಂಕಲ್ಪ ತೊಟ್ಟಿದೆ ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲೂ ರಿಯಲ್ ಎಸ್ಟೇಟ್ ಉದ್ಯಮದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.

ಕೊಳಗೇರಿಗಳಲ್ಲಿ ಸುಸುಜ್ಜಿತ ಮನೆಗಳನ್ನು ನಿರ್ಮಿಸಿ ಕೊಡುವತ್ತ ರಾಜ್ಯ ಸರಕಾರ ಚಿಂತನೆ ನಡೆಸುತ್ತಿದ್ದು,ರಿಯಲ್ ಎಸ್ಟೇಟ್ ಉದ್ಯಮ ಈ ನಿಟ್ಟಿನಲ್ಲಿ ಕೈ ಜೋಡಿಸಬೇಕೆಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಈ ಸಂದರ್ಭದಲ್ಲಿ ಕರೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ