ಆ್ಯಪ್ನಗರ

ಬೆಳಗಾವಿಯಿಂದ ಬೆಂಗಳೂರಿಗೆ ಮಹಿಳಾ ಪೊಲೀಸರ ಸೈಕ್ಲಿಂಗ್‌

ಕೆಎಸ್‌ಆರ್‌ಪಿ, ಉಮೀದ್‌ 1000 ಸೈಕ್ಲೋಥಾನ್‌ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ಸಹಯೋಗದಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ಬೆಳಗಾವಿಯಿಂದ ಬೆಂಗಳೂರಿಗೆ ಡಿ.5 ರಿಂದ 9 ವರೆಗೆ ಸೈಕಲ್‌ ರ‍್ಯಾಲಿ ಏರ್ಪಡಿಸಲಾಗಿದೆ.

Vijaya Karnataka 3 Dec 2018, 8:13 am
ಬೆಂಗಳೂರು: ಮಹಿಳಾ ಸಬಲೀಕರಣ, ದೈಹಿಕ ಆರೋಗ್ಯಕಾಪಾಡುವುದು, ಮಹಿಳಾ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಬೆಳಗಾವಿಯಿಂದ ಬೆಂಗಳೂರಿಗೆ 540 ಕಿ.ಮೀ.ಗಳ ಐದು ದಿನಗಳ ಸೈಕ್ಲೋಥಾನ್‌ ಆಯೋಜಿಸಲಾಗಿದೆ ಎಂದು ಕೆಎಸ್‌ಆರ್‌ಪಿ ಎಡಿಜಿಪಿ ಭಾಸ್ಕರ್‌ರಾವ್‌ ತಿಳಿಸಿದರು.
Vijaya Karnataka Web cycling


ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಕೆಎಸ್‌ಆರ್‌ಪಿ, ಉಮೀದ್‌ 1000 ಸೈಕ್ಲೋಥಾನ್‌ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ಸಹಯೋಗದಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಾಗಿ ಬೆಳಗಾವಿಯಿಂದ ಬೆಂಗಳೂರಿಗೆ ಡಿ.5 ರಿಂದ 9 ವರೆಗೆ ಸೈಕಲ್‌ ರ‍್ಯಾಲಿ ಏರ್ಪಡಿಸಲಾಗಿದೆ. ಡಿ.5ರಂದು ಬೆಳಗಾವಿಯಿಂದ ಹೊರಡುವ ಸೈಕ್ಲೋಥಾನ್‌ ಹುಬ್ಬಳ್ಳಿ, ರಾಣೆಬೆನ್ನೂರು, ಚಿತ್ರದುರ್ಗ, ತುಮಕೂರು ಮೂಲಕ ಸಾಗಿ ಬೆಂಗಳೂರಿಗೆ ಡಿ.9ರಂದು ತಲುಪಲಿದೆ'' ಎಂದು ಮಾಹಿತಿ ನೀಡಿದರು.

''ರ‍್ಯಾಲಿಯಲ್ಲಿ ಸೈಕ್ಲಿಸ್ಟ್‌ಗಳಾಗಿರುವ 50 ಮಹಿಳಾ ಪೊಲೀಸ್‌ ಸಿಬ್ಬಂದಿ, 10 ಮಹಿಳಾ ಐಪಿಎಸ್‌, ಐಎಎಸ್‌, ಕೆಎಎಸ್‌ ಮತ್ತು ಕೆಎಸ್‌ಆರ್‌ಪಿ ಅಧಿಕಾರಿಗಳ ಜತೆ ವಿವಿಧ ಸಂಘ- ಸಂಸ್ಥೆಗಳ 40 ಮಹಿಳಾ ಸೈಕ್ಲಿಸ್ಟ್‌ಗಳು ಸೇರಿ ನೂರು ಮಂದಿ ಭಾಗವಹಿಸಲಿದ್ದಾರೆ. ಮಹಿಳಾ ಸಬಲೀಕರಣ, ಶಿಕ್ಷಣ, ಸ್ವಚ್ಛ ಭಾರತ, ವೃಕ್ಷಾರೋಹಣ, ಬಾಲ್ಯ ವಿವಾಹ ತಡೆ ಕುರಿತು ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸುವುದು ಸೈಕ್ಲೋಥಾನ್‌ನ ಮುಖ್ಯ ಧ್ಯೇಯವಾಗಿದೆ. ಮಾರ್ಗಮಧ್ಯೆ ಸರಕಾರಿ ಶಾಲೆ, ಕಾಲೇಜುಗಳು, ಐಟಿಐ ಸಂಸ್ಥೆಗಳಿಗೆ ಭೇಟಿ ನೀಡಲಾಗುತ್ತದೆ'' ಎಂದು ತಿಳಿಸಿದರು.

ಸೈಕ್ಲಿಸ್ಟ್‌ಗಳ ತಂಡವೂ ಪ್ರತಿದಿನ ಸರಾಸರಿ 100 ಕಿ.ಮೀ.ಗೂ ಹೆಚ್ಚು ದೂರ ಕ್ರಮಿಸಲಿದೆ. ಸುದ್ದಿಗೋಷ್ಠಿಯಲ್ಲಿ ಕೆಎಸ್‌ಆರ್‌ಪಿ ಐಜಿಪಿ ಸತೀಶ್‌ ಕುಮಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ