ಆ್ಯಪ್ನಗರ

ಖ್ಯಾತ ಸಾಹಿತಿ ಗಿರಡ್ಡಿ ಗೋವಿಂದರಾಜ ನಿಧನ

ಧಾರವಾಡದಲ್ಲಿ ಹೃದಯಾಘಾತ

Vijaya Karnataka Web 11 May 2018, 10:27 pm
ಧಾರವಾಡ: ಕನ್ನಡದ ಶ್ರೇಷ್ಠ ವಿಮರ್ಶಕ ಡಾ.ಗಿರಡ್ಡಿ ಗೋವಿಂದರಾಜ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
Vijaya Karnataka Web ಗಿರಡ್ಡಿ ಗೋವಿಂದರಾಜ
ಗಿರಡ್ಡಿ ಗೋವಿಂದರಾಜ


ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.

ನವ್ಯ ಸಾಹಿತ್ಯ ಯುಗದ ಪ್ರಥಮ ಪಂಕ್ತಿಗೆ ಸೇರುವ ಕನ್ನಡದ ಶ್ರೇಷ್ಠ ವಿಮರ್ಶಕ ಡಾ.ಗಿರಡ್ಡಿ ಗೋವಿಂದರಾಜ 1939 ಸೆಪ್ಟಂಬರ್‌ 23ರಂದು ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿಯಲ್ಲಿ ಜನಿಸಿದರು.

ಗಿರಡ್ಡಿಯವರ ಪ್ರಾಥಮಿಕ ಶಿಕ್ಷಣ ಅಬ್ಬಿಗೇರಿಯಲ್ಲಿ, ಮಾಧ್ಯಮಿಕ ಶಿಕ್ಷಣವನ್ನು ರೋಣದಲ್ಲಿ ಪೂರ್ಣಗೊಳಿಸಿದ ಗಿರಡ್ಡಿಯವರು 1957ರಲ್ಲಿ ಎಸ್.ಎಸ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದರು.

1961ರಲ್ಲಿ ಧಾರವಾಡದಲ್ಲಿರುವ ಕರ್ನಾಟಕ ಕಾಲೇಜಿನಿಂದ ಬಿ.ಎ. ಪದವಿಯನ್ನು ಪಡೆದ ಗಿರಡ್ಡಿ ಕರ್ನಾಟಕ ವಿಶ್ವವಿದ್ಯಾಲಯದ ಎಂ.ಎ. ಇಂಗ್ಲಿಷ್ ಪದವಿಯನ್ನು 1963ರಲ್ಲಿ ಹಾಗೂ ಎಂ.ಎ. ಕನ್ನಡ ಪದವಿಯನ್ನು 1969ರಲ್ಲಿ ಪಡೆದರು. 1970ರಲ್ಲಿ ಹೈದರಾಬಾದದಲ್ಲಿರುವ ಸೆಂಟ್ರಲ್ ಇನ್ಸ್ಟಿಟ್ಯೂಟದಿಂದ ಡಿಪ್ರೋಮಾ ಇನ್ ಇಂಗ್ಲಿಷ್ ಸ್ಟಡೀಸ್ ಪಡೆದರು. 1973ರಲ್ಲಿ ಇಂಗ್ಲೆಂಡ್‌ನಲ್ಲಿರುವ ಲ್ಯಾಂಕಾರ್ಸ್ಟ ವಿಶ್ವವಿದ್ಯಾಲಯದಿಂದ ಎಂ.ಎ. (ಭಾಷಾಶಾಸ್ತ) ಪದವಿ ಪಡೆದರು.

1983ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಶೈಲಿಶಾಸದಲ್ಲಿ ಪಿಎಚ್‌ಡಿ ಪದವಿ ಪಡೆದರು. 1963-1964ರವರೆಗೆ ಹಾವೇರಿ ಜಿಲ್ಲೆಯ ಹನುಮನಮಟ್ಟಿಯಲ್ಲಿಯ ಗ್ರಾಮೀಣ ಮಹಾವಿದ್ಯಾಲಯದಲ್ಲಿ ಇಂಗ್ಲಿಷ್ ಅಧ್ಯಾಪಕರೆಂದು ವೃತ್ತಿಜೀವನ ಆರಂಭಿಸಿದ ಗಿರಡ್ಡಿಯವರು 1964ರಿಂದ 1970ರವರೆಗೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಬೋಧಿಸಿದರು.

1970ರಿಂದ 1984ರವರೆಗೆ ಕಲಬುರ್ಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. 1984ರಿಂದ 1998ರವರೆಗೆ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರವಾಚಕರಾಗಿ, ಪ್ರಾಧ್ಯಾಪಕರಾಗಿ ಹಾಗು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ 1999 ಮಾರ್ಚದಲ್ಲಿ ನಿವೃತ್ತರಾದರು.
ಗಿರಡ್ಡಿ ಗೋವಿಂದರಾಜರು ಸೃಜನಶೀಲ ಸಾಹಿತ್ಯ ಹಾಗೂ ವಿಮರ್ಶೆ ಎರಡರಲ್ಲೂ ಖ್ಯಾತರಾಗಿದ್ದಾರೆ.

ಶಾರದಾಲಹರಿ, ರಸವಂತಿ, ಮರ್ಲಿನ್ ಮನ್ರೋ ಮತ್ತು ಇತರ ಪದ್ಯಗಳು, ಕಥಾಸಂಕಲನ, ಆ ಮುಖಾ-ಈ ಮುಖಾ, ಮಣ್ಣು, ಹಂಗು ಮತ್ತು ಇತರ ಕತೆಗಳು, ಒಂದು ಬೇವಿನಮರದ ಕಥೆ - ಇವು ಗಿರಡ್ಡಿ ಅವರ ಮುಖ್ಯ ಕೃತಿಗಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ