ಆ್ಯಪ್ನಗರ

ಟಿ. ಸುನಂದಮ್ಮ ಸಾಹಿತ್ಯ ಪ್ರಶಸ್ತಿಗೆ ಡಾ. ವೈದೇಹಿ ಆಯ್ಕೆ

ಖ್ಯಾತ ಲೇಖಕಿ ಡಾ ವೈದೇಹಿಯವರನ್ನು 2019ನೇ ಸಾಲಿನ ಪ್ರಥಮ 'ಟಿ ಸುನಂದಮ್ಮ ಸಾಹಿತ್ಯ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ...

Vijaya Karnataka 7 Jul 2019, 5:00 am
ಬೆಂಗಳೂರು: ಖ್ಯಾತ ಲೇಖಕಿ ಡಾ. ವೈದೇಹಿಯವರನ್ನು 2019ನೇ ಸಾಲಿನ ಪ್ರಥಮ 'ಟಿ. ಸುನಂದಮ್ಮ ಸಾಹಿತ್ಯ ಪ್ರಶಸ್ತಿ'ಗೆ ಆಯ್ಕೆ ಮಾಡಲಾಗಿದೆ.
Vijaya Karnataka Web Vaidehi


ಪ್ರಶಸ್ತಿಯು 30 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದ್ದು, ಜು.26ರಂದು ಸಂಜೆ ಕಸಾಪದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಡಾ. ವಸುಂಧರಾ ಭೂಪತಿ, ಪ್ರೊ. ಭುವನೇಶ್ವರಿ ಹೆಗಡೆ, ಪ್ರೊ. ಎಸ್‌ಜಿ. ಸಿದ್ದರಾಮಯ್ಯ, ಡಾ. ಆರ್‌. ಪೂರ್ಣಿಮಾ, ಡಾ. ನೇಮಿಚಂದ್ರ ಅವರ ಆಯ್ಕೆ ಸಮಿತಿಯು ವೈದೇಹಿಯವರನ್ನು ಸರ್ವಾನುಮತದಿಂದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಟಿ. ಸುನಂದಮ್ಮ ಅವರ ಬಂಧುಗಳು ಮತ್ತು ಅಭಿಮಾನಿಗಳು ಟಿ. ಸುನಂದಮ್ಮ ಸ್ಮಾರಕ ಪ್ರತಿಷ್ಠಾನವನ್ನು ಸ್ಥಾಪಿಸಿ, ಅದರ ಮೂಲಕ ಪ್ರಪ್ರಥಮ ಬಾರಿಗೆ ಟಿ. ಸುನಂದಮ್ಮ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತಿದೆ. ಇದನ್ನು ಪ್ರತಿ ವರ್ಷವೂ ಮುಂದುವರಿಸಲಾಗುವುದು ಎಂದು ಆಯ್ಕೆ ಸಮಿತಿಯ ಡಾ. ವಸುಂಧರಾ ಭೂಪತಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ