ಆ್ಯಪ್ನಗರ

ಹೆಬ್ಬಾರ್‌ ಏನೆಂದರು ಗೊತ್ತೆ

ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಶಿವರಾಮ ಹೆಬ್ಬಾರ್‌ ಅವರ ರಾಜಕೀಯ ನಡೆ ಕುತೂಹಲ ...

Vijaya Karnataka 15 Jan 2019, 5:00 am
ಯಲ್ಲಾಪುರ (ಉತ್ತರ ಕನ್ನಡ): ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಶಿವರಾಮ ಹೆಬ್ಬಾರ್‌ ಅವರ ರಾಜಕೀಯ ನಡೆ ಕುತೂಹಲ ಸೃಷ್ಟಿಸಿದೆ.
Vijaya Karnataka Web Shivram Hebbar   Cong


ಕಳೆದ ಎರಡು ದಿನಗಳಿಂದ ಹೆಬ್ಬಾರ್‌ ಕ್ಷೇತ್ರದಲ್ಲಿ ಕಾಣಿಸುತ್ತಿಲ್ಲ. ಕುಟುಂಬ ಸಮೇತ ಉತ್ತರ ಭಾರತ ಪ್ರವಾಸಕ್ಕೆ ತೆರಳಿದ್ದಾರೆ ಎಂದು ಅವರ ಆಪ್ತ ವಲಯ ಹೇಳುತ್ತಿದೆ. ಭಾನುವಾರ ಮತ್ತು ಸೋಮವಾರ ಕ್ಷೇತ್ರದಲ್ಲಿ ನಿಗದಿಯಾಗಿದ್ದ ಹಲವು ಕಾರ್ಯಕ್ರಮಗಳಲ್ಲಿ ಅವರು ಗೈರು ಹಾಜರಿ ಎದ್ದು ಕಾಣುತ್ತಿತ್ತು. ಆದರೂ ಎಲ್ಲಿಯೂ ತಮ್ಮ ರಾಜಕೀಯ ನಡೆಯ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.

ಈ ಕುರಿತು ಸೋಮವಾರ 'ವಿಜಯ ಕರ್ನಾಟಕ' ಜೊತೆ ಮಾತನಾಡಿದ ಅವರು ಪಕ್ಷಾಂತರ ಕುರಿತ ಯಾವುದೇ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು. ''ಒಂದೆರಡು ದಿನದಲ್ಲಿ ಈ ಕುರಿತು ಮಾತಾಡುತ್ತೇನೆ'' ಎಂದಷ್ಟೇ ಹೇಳಿದರು.

ಹಿರಿತನ ಮತ್ತು ಅನುಭವದ ಆಧಾರದಲ್ಲಿ ತಮಗೆ ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಹೆಬ್ಬಾರ್‌ ಬೇಸರಗೊಂಡಿದ್ದರು. ಅವರನ್ನು ಸಮಾಧಾನಪಡಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಈ ತಿಂಗಳ 18ರಂದು ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಅಧ್ಯಕ್ಷ ರಾಗಿ ಅಧಿಧಿಕಾರ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಪಕ್ಷಾಂತರದ ಸುದ್ದಿ ಹೊಯ್ದಾಡುತ್ತಿರುವ ಸಂದರ್ಭದಲ್ಲಿ ಅವರು ಅಧಿಧಿಕಾರ ಸ್ವೀಕರಿಸುವರೇ ? ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ