ಆ್ಯಪ್ನಗರ

Political Crisis: ಗುರುಗ್ರಾಮದಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್‌?

ಬೆಂಗಳೂರಿನಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಯಡಿಯೂರಪ್ಪ. ಅನಾರೋಗ್ಯಕ್ಕೀಡಾಗಿರುವ ತುಮಕೂರು ಸಿದ್ದಗಂಗಾ ಶ್ರೀಗಳ ಆರೋಗ್ಯ ಕುರಿತು ವೈದ್ಯರೊಂದಿಗೆ ಚರ್ಚಿಸಿ ಯಡಿಯೂರಪ್ಪ ಮಾಹಿತಿ ಪಡೆಯಲಿದ್ದಾರೆ.

Vijaya Karnataka Web 16 Jan 2019, 4:34 pm
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕ್ಷಿಪ್ರ ಬೆಳವಣಿಗೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬೆಂಗಳೂರು ಕಡೆ ಪ್ರಯಾಣ ಬೆಳೆಸಲಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ಕಳೆ ಕೆಲವು ದಿನಗಳಿಂದ ದೆಹಲಿ, ಗುರುಗ್ರಾಮದಲ್ಲಿ ಬೀಡುಬಿಟ್ಟಿದ್ದ ಬಿ.ಎಸ್‌. ಯಡಿಯೂರಪ್ಪ ಬುಧವಾರ ಸಂಜೆ ಅಥವಾ ರಾತ್ರಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.

ಗುರುಗ್ರಾಮದ ಹೋಟೆಲ್‌ನಲ್ಲಿ ತಂಗಿರುವ ಬಿ.ಎಸ್.‌ ಯಡಿಯೂರಪ್ಪ ಸಂಜೆ ಹೊಸದಿಲ್ಲಿಗೆ ಆಗಮಿಸಲಿದ್ದು, ವರಿಷ್ಠ ನಾಯಕರನ್ನು ಭೇಟಿ ಮಾಡಲಿದ್ದಾರೆ. ಮುಂದಿನ ನಡೆಗಳ ಬಗ್ಗೆ ಸಮಾಲೋಚನೆ ನಡೆಸಿ ನಂತರ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಬಿಜೆಪಿಯ ವರಿಷ್ಠ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಯಡಿಯೂರಪ್ಪ ಬೆಂಗಳೂರಿಗೆ ಆಗಮಿಸಲಿದ್ದು, ನಂತರ ತುಮಕೂರಿಗೆ ತೆರಳಲಿದ್ದಾರೆ.

ಬೆಂಗಳೂರಿನಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಯಡಿಯೂರಪ್ಪ. ಅನಾರೋಗ್ಯಕ್ಕೀಡಾಗಿರುವ ತುಮಕೂರು ಸಿದ್ದಗಂಗಾ ಶ್ರೀಗಳ ಆರೋಗ್ಯ ಕುರಿತು ವೈದ್ಯರೊಂದಿಗೆ ಚರ್ಚಿಸಿ ಯಡಿಯೂರಪ್ಪ ಮಾಹಿತಿ ಪಡೆಯಲಿದ್ದಾರೆ.

ಯಡಿಯೂರಪ್ಪ ಜತೆ ಸೋಮಣ್ಣ ಕೂಡ ಆಗಮಿಸಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ