ಆ್ಯಪ್ನಗರ

ಪ್ರತ್ಯೇಕ ಲಿಂಗಾಯತ ಧರ್ಮ ಮನವಿಗೆ ಬಿಎಸ್‌ವೈ ಸಹಿ ?

2013ರಲ್ಲಿ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೋರಿ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರಕ್ಕೆ ಸಲ್ಲಿಸಿದ್ದ ಮನವಿಗೆ ಸಹಿ ಮಾಡಿವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಳ್ಳಿ ಹಾಕಿದ್ದಾರೆ.

TIMES INTERNET NETWORK 22 Mar 2018, 12:54 pm
ಬೆಂಗಳೂರು: 2013ರಲ್ಲಿ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ನೀಡುವಂತೆ ಕೋರಿ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರಕ್ಕೆ ಸಲ್ಲಿಸಿದ್ದ ಮನವಿಗೆ ಸಹಿ ಮಾಡಿವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಳ್ಳಿ ಹಾಕಿದ್ದಾರೆ.
Vijaya Karnataka Web yeddyurappas signature on document but he denies signing separate religion status memo
ಪ್ರತ್ಯೇಕ ಲಿಂಗಾಯತ ಧರ್ಮ ಮನವಿಗೆ ಬಿಎಸ್‌ವೈ ಸಹಿ ?


ಆದರೆ ಯಡಿಯೂರಪ್ಪ ಅವರ ಸಹಿಯೊಂದಿಗೆ ಕೇಂದ್ರಕ್ಕೆ ಸಲ್ಲಿಕೆಯಾಗಿರುವ ಮನವಿ ಪತ್ರದ ಪ್ರತಿಯನ್ನು 'ಟೈಮ್ಸ್‌ ಆಫ್‌ ಇಂಡಿಯಾ' ಬಹಿರಂಗಪಡಿಸಿದ್ದು, ಆಗ ಸಲ್ಲಿಸಿದ್ದ ಪ್ರತ್ಯೇಕ ಧರ್ಮದ ಮನವಿಯನ್ನು ಯುಪಿಎ ಸರಕಾರ ತಿರಸ್ಕರಿಸಿತ್ತು ಎಂದು ತಿಳಿಸಿದೆ.

'ಆದರೆ ನಾನು ಯಾವತ್ತೂ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ಸ್ಥಾನಮಾನ ಕೋರಿ ಯಾವುದೇ ದಾಖಲೆಗೆ ಸಹಿ ಮಾಡಿಲ್ಲ,' ಎಂಬುದಾಗಿ ಯಡಿಯೂರಪ್ಪ ಹೇಳುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಜನರ ಭಾವನೆಗಳೊಂದಿಗೆ ಆಟವಾಡುತ್ತಿದ್ದಾರೆ. ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಾತಿಗಳು, ಸಮುದಾಯಗಳು ಪತ್ರ್ಯೇಕತೆಯ ಬೇಡಿಕೆ ಮಂಡಿಸಿದರೆ ಸಿದ್ದರಾಮಯ್ಯ ಒಪ್ಪುವರೇ , ಮುಖ್ಯಮಂತ್ರಿಗಳ ಕಾರ್ಯಸೂಚಿ ಏನು ಎಂದು ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕೂಡ ಹೀಗೆ ಸಮುದಾಯವನ್ನು ಒಡೆಯುವ ಸರಕಾರದ ನಡೆಯನ್ನು ವಿರೋಧಿಸುತ್ತಾರೆ. ಅವರು ಮಾ.23ರಂದು ಈ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾರೆ ಎಂದು ಬಿಎಸ್‌ವೈ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ