ಆ್ಯಪ್ನಗರ

ಬಿಎಸ್‌ವೈ-ಮೋದಿ ಭೇಟಿ ಇಂದು: ಪರಿಹಾರ ಘೋಷಣೆ ಸಾಧ್ಯತೆ?

ಹೊಸದಿಲ್ಲಿ ಪ್ರವಾಸ ಕೈಗೊಳ್ಳಲಿರುವ ಯಡಿಯೂರಪ್ಪ ಮೋದಿ ಭೇಟಿ ಮಾಡಲಿದ್ದಾರೆ. ಪ್ರವಾಹ ಸಂತ್ರಸ್ತವಾಗಿರುವ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡುವ ನಿರೀಕ್ಷೆ ಇದೆ.

Vijaya Karnataka 16 Aug 2019, 5:30 am
ಬೆಂಗಳೂರು : ಪ್ರವಾಹ ಸಂತ್ರಸ್ತವಾಗಿರುವ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡುವ ಮೂಲಕ ಸಾಂತ್ವನ ನೀಡುವ ಸಾಧ್ಯತೆ ಇದೆ.
Vijaya Karnataka Web ಮೋದಿ-ಯಡಿಯೂರಪ್ಪ
ಮೋದಿ-ಯಡಿಯೂರಪ್ಪ


ಸಂಪುಟ ವಿಸ್ತರಣೆಗೆ ವರಿಷ್ಠರ ಒಪ್ಪಿಗೆ ಪಡೆಯುವ ಜತೆಗೆ ಪ್ರಧಾನಿ ಭೇಟಿ ಮಾಡಿ ನೆರವಿಗೆ ಮೊರೆ ಇಡಲು ಸಿಎಂ ಯಡಿಯೂರಪ್ಪ ಗುರುವಾರ ಸಂಜೆ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ. ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಗೃಹ ಸಚಿವ ಅಮಿತ್‌ ಶಾ ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಹೀಗಾಗಿ ಕೇಂದ್ರ ಸರಕಾರದಿಂದ ಉದಾರ ನೆರವು ಸಿಗಲಿದೆ ಎಂದು ರಾಜ್ಯ ಸರಕಾರ ನಿರೀಕ್ಷೆ ಹೊಂದಿದೆ. ಪ್ರಾಥಮಿಕ ಹಂತದಲ್ಲಿ ಕೇಂದ್ರ 3000 ಕೋಟಿ ರೂ. ನೆರವು ನೀಡುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ