ಆ್ಯಪ್ನಗರ

10 ಕೋಟಿ ಕೊಟ್ಟರೆ ಊರಿಗೆ ದಾನಿಗಳ ಹೆಸರು: ಯಡಿಯೂರಪ್ಪ

ಕರ್ನಾಟಕದಲ್ಲಿ ಹಿಂದೆಂದೂ ಕಂಡರಿಯದ ಧಾರಾಕಾರ ಮಳೆಯಿಂದಾಗಿ ಹಲವಾರು ಜಿಲ್ಲೆಗಳು ಮುಳುಗಡೆಯಾಗಿವೆ. ಇದರಿಂದ ಸಾವಿರಾರು ಕೋಟಿ ರೂಪಾಯಿ ನಷ್ಟ ಉಂಟಾಗಿದೆ.

Vijaya Karnataka Web 14 Aug 2019, 9:34 pm
ಬೆಂಗಳೂರು: ಪ್ರವಾಹ ಸಂತ್ರಸ್ತ ಜಿಲ್ಲೆಗಳ ಮರು ನಿರ್ಮಾಣಕ್ಕಾಗಿ ಕೈಗಾರಿಕೋದ್ಯಮಿಗಳ ಮೊರೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, '10 ಕೋಟಿ ರೂ. ಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಪುನಶ್ಚೇತನಗೊಂಡ ಗ್ರಾಮಗಳಿಗೆ ಇಡಲಾಗುವುದು ಎಂದು ತಿಳಿಸಿದ್ದಾರೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ


ನೆರೆ ಪರಿಹಾರ ಹಿನ್ನೆಲೆಯಲ್ಲಿ ಉದ್ದಿಮೆದಾರರ ಜತೆ ನಡೆಸಿದ ಸಭೆಯಲ್ಲಿ ಈ ವಿಷಯ ತಿಳಿಸಿದರು.

ಸಭೆಯಲ್ಲಿ 60ಕ್ಕೂ ಹೆಚ್ಚು ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಟಿವಿಎಸ್‌ ಮೋಟಾರ್ಸ್‌ - 1 ಕೋಟಿ ರೂ. ಟಯೋಟ - 2 ಕೋಟಿ ರೂ. ಕ್ರೆಡಾಯ್‌ - 3 ಕೋಟಿ ರೂ. ಲೋಗೋಸ್‌ ಗ್ರೂಪ್‌ - 25 ಲಕ್ಷ ರೂ. ನೀಡುವ ಭರವಸೆ ನೀಡಿದವು.

ಸಂತ್ರಸ್ತರಿಗೆ ಹೆಚ್ಚುವರಿ ಹಣ ಬಿಡುಗಡೆ

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಜತೆಗೆ ಮನೆ ಕಳೆದುಕೊಂಡವರಿಗೆ

ಹತ್ತು ತಿಂಗಳ ಕಾಲ ಐದು ಸಾವಿರ ರೂ. ಬಾಡಿಗೆ ರೂಪದಲ್ಲಿ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಎನ್‌ಡಿಆರ್‌ಎಫ್‌ ನಿಧಿಯಿಂದ 6,200 ರೂ. ರಾಜ್ಯ ಸರಕಾರದಿಂದ 3, 800 ರೂ. ಸೇರಿದಂತೆ 10000 ರೂ.ನ್ನು ತಕ್ಷಣದ ಪರಿಹಾರವಾಗಿ ನೀಡಲು ಬುಧವಾರ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರ ನಿರ್ಧರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ