ಆ್ಯಪ್ನಗರ

ಮುಖ್ಯ ಸಚೇತಕ ಆಗುವ ಮೊದಲು ಒಂದು ದಿನವೂ ಸದನದಲ್ಲಿ ಮಾತನಾಡಿಲ್ಲ: ಸತೀಶ್ ರೆಡ್ಡಿಗೆ ಸಿದ್ದರಾಮಯ್ಯ ಟಾಂಗ್

ಮುಖ್ಯ ಸಚೇತಕ ಆಗಿ ನೇಮಕವಾಗುವವರೆಗೂ ನೀವು ಒಮ್ಮೆಯೂ ಸದನದಲ್ಲಿ ಎದ್ದು ನಿಂತು ಮಾಡನಾಡಿರಲಿಲ್ಲ ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ.

Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 15 Sep 2021, 5:23 pm

ಹೈಲೈಟ್ಸ್‌:

  • ನೀವು ಮುಖ್ಯ ಸಚೇತಕ ಆಗಿದ್ದೀರಿ ಎಂದು ಗೊತ್ತಾಗಿದೆ-ಸಿದ್ದರಾಮಯ್ಯ ವ್ಯಂಗ್ಯ
  • ಬೆಲೆ ಏರಿಕೆ ವಿಚಾರದ ಚರ್ಚೆಗೆ ಅಡ್ಡಿಪಡಿಸಿದ್ದಕ್ಕೆ ವಿಪಕ್ಷ ನಾಯಕ ಟೀಕೆ
  • ಸದನದ ಬಾವಿಗಿಳಿದು ಜೆಡಿಎಸ್ ಶಾಸಕರಿಂದ ಪ್ರತಿಭಟನೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Siddaramaiah
ಬೆಂಗಳೂರು: 'ನೀವು ಮುಖ್ಯ ಸಚೇತಕ ಆಗುವ ಮೊದಲು ಒಂದು ದಿನವೂ ಸದನದಲ್ಲಿ ಎದ್ದು ಮಾತನಾಡಿಲ್ಲ' ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟರು. ‌
ಬೆಲೆ ಏರಿಕೆ ವಿಚಾರವಾಗಿ ಬುಧವಾರ ವಿಧಾನಸಭೆಯಲ್ಲಿ ನಿಯಮ 69 ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತಿಗೆ ಬಿಜೆಪಿ ಸದಸ್ಯರು ಎದ್ದು ನಿಂತು ಅಡ್ಡಿಪಡಿಸುತ್ತಿದ್ದರು. ಈ ವೇಳೆ ಎದ್ದು ನಿಂತು ಮಾತನಾಡುತ್ತಿದ್ದ ಸತೀಶ್ ರೆಡ್ಡಿ ವಿರುದ್ಧ ಗರಂ ಆದ ಸಿದ್ದರಾಮಯ್ಯ, ನೀವು ಮುಖ್ಯ ಸಚೇತಕ ಆಗಿದ್ದೀರಾ ಎಂದು ಗೊತ್ತಾಗಿದೆ. ಮುಖ್ಯ ಸಚೇತಕ ಆಗುವ ಮೊದಲು ಒಂದು ದಿನವೂ ಎದ್ದೇಳಿಲ್ಲ ಎಂದು ಕಿಚಾಯಿಸಿದರು.

ಈ ವೇಳೆ, ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ ಅದಕ್ಕೆ ಮಾತನಾಡುತ್ತಿರಲಿಲ್ಲ ಎಂದು ಕಾಂಗ್ರೆಸ್ ಸದಸ್ಯರೂ ಕಾಲೆಳೆದರು.
ಸದನದಲ್ಲಿ ಬೆಲೆ ಏರಿಕೆ ಗದ್ದಲ; ಸರ್ಕಾರ 'ಕ್ರಿಮಿನಲ್ ಲೂಟ್' ಮಾಡ್ತಿದೆ ಎಂದು ಸಿದ್ದರಾಮಯ್ಯ ಕಿಡಿ!
ಸದನದ ಬಾವಿಗಿಳಿದು ಸಾ.ರಾ ಮಹೇಶ್ ಪ್ರತಿಭಟನೆ
ರೋಹಿಣಿ ಸಿಂಧೂರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡಬೇಕು ಎಂದು ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಹಾಗೂ ಕೆಲವು ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು.

ಬ್ಯಾಗ್ ಹಗರಣ ವಿಚಾರವಾಗಿ ‌ಹಕ್ಕುಚ್ಯುತಿ ಮಂಡನೆಗೆ ಸಾರಾ ಮಹೇಶ್ ಅವಕಾಶ ಕೋರಿದರು.‌ ಶೂನ್ಯ ವೇಳೆಯಲ್ಲಿ ವಿಚಾರ ಪ್ರಸ್ತಾಪಕ್ಕೆ ಅವಕಾಶ ಸಿಕ್ಕಿಲ್ಲ ಎಂದು ಸದನದ ಬಾವಿಗೆ ಇಳಿದು ಆಕ್ರೋಶ ವ್ಯಕ್ತಪಡಿಸಿದರು. ‌ಇದಕ್ಕೆ ಮತ್ತೆ ಅವಕಾಶ ಕಲ್ಪಿಸುತ್ತೇನೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು. ಸ್ಪೀಕರ್ ಮನವಿ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆದುಕೊಂಡರು.‌
ಸಿದ್ದರಾಮಯ್ಯ ದೆಹಲಿಗೆ ಹೋಗ್ತಾರಾ? ಸದನದಲ್ಲಿ ಸ್ವಾರಸ್ಯಕರ ಚರ್ಚೆ!
ಮೈಶುಗರ್ ಖಾಸಗೀಕರಣ
ಮಂಡ್ಯ ಜಿಲ್ಲೆಯ ಮೈಶುಗರ್ ಕಾರ್ಖಾನೆ ಖಾಸಗೀಕರಣ ಪ್ರಯತ್ನ ನಡೆಯುತ್ತಿದೆ ಎಂದು ಜೆಡಿಎಸ್ ಶಾಸಕ ಅನ್ನದಾನಿ ಆರೋಪ ಮಾಡಿದರು.

ಬಹಳ ದಿನಗಳಿಂದ ರೈತರು ಹಾಗೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಯಡಿಯೂರಪ್ಪ ಅವಧಿಯಲ್ಲಿ ಶಾಸಕರು ಹಾಗೂ ಮುಖಂಡರ ಜೊತೆ ಮನವಿ ಸಲ್ಲಿಸಿದ್ದೇವೆ.‌ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರೂ ಯಾವುದೇ ಆದೇಶ ಹೊರಡಿಸಿಲ್ಲ. ಇದೀಗ ಮೈಶುಗರ್ ಕಾರ್ಖಾನೆಯನ್ನು ಉಳಿಸಿಕೊಳ್ಳಲು ಹೋರಾಟ ಮಾಡುವ ಸಂದರ್ಭ ಬಂದಿದೆ.‌ ಸರ್ಕಾರಿ ಸಾಮ್ಯದಲ್ಲಿ ನಡೆಸುವ ನಿಟ್ಟಿನಲ್ಲಿ ನೂರು ಕೋಟಿಯನ್ನು ಬಜೆಟ್ ನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮೀಸಲು ಇಟ್ಟಿದ್ದರು ಎಂದರು.

ಈ ಬಗ್ಗೆ ಜೆಡಿಎಸ್ ಶಾಸಕರ ಬೇಡಿಕೆ ಹಿನ್ನೆಲೆಯಲ್ಲಿ ಅರ್ಧ ಗಂಟೆ ಚರ್ಚೆಗೆ ಸ್ಪೀಕರ್ ಅವಕಾಶ ಕಲ್ಪಿಸುವ ಭರವಸೆ ನೀಡಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ