ಆ್ಯಪ್ನಗರ

ರೈತ ವಿರೋಧಿ ಕಾಯ್ದೆ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರೈತ ವಿರೋಧಿ ಕಾಯ್ದೆಯನ್ನು ಕೂಡಲೇ ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಯೂತ್‌ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 1 Dec 2020, 4:51 pm
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ, ಬಂಡವಾಳಶಾಹಿಗಳ ಪರವಾಗಿ ರೈತ ವಿರೋಧಿ ಕಾಯ್ದೆಗಳನ್ನು ತಂದು ದೇಶದ ಅನ್ನದಾತರಿಗೆ ಮರಣ ಶಾಸನ ಬರೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
Vijaya Karnataka Web youth congress


ಬೆಂಗಳೂರಿನ ರೇಸ್ ಕೋರ್ಸ್‌ ರಸ್ತೆಯ ಮೌರ್ಯ ಹೋಟೆಲ್‌ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.


ಮೊಗಲರ ಕಾಲದಲ್ಲಿ ಹಿಂದೂ-ಮುಸ್ಲಿಮ್ ಕ್ರಾಸ್‌ ಆಗಿ ಹುಟ್ಟಿದವರು ಸಾಕಷ್ಟು ಜನರಿದ್ದಾರೆ ಎಂದ ಸಿದ್ದರಾಮಯ್ಯ!

ಈ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ಲಕ್ಷಾಂತರ ರೈತರು ಬೀದಿಗಿಳಿದು, ದೆಹಲಿ ಚಲೋ ನಡೆಸುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರ ಅನ್ನದಾತರ ಪ್ರತಿಭಟನೆಯನ್ನು ಬಲಪ್ರಯೋಗದ ಮೂಲಕ‌ ಹತ್ತಿಕ್ಕಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಈ ರೈತ ವಿರೋಧಿ ನಡೆಯನ್ನು ಖಂಡಿಸಿ, ಕೂಡಲೇ ರೈತರೊಂದಿಗೆ ಚರ್ಚಿಸಿ ಅವರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ದೆಹಲಿ ಗಡಿ ಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರು ಕೂಡಲೇ ಜಾರಿಗೊಂಡಿರುವ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಮುಖ್ಯಸ್ಥ ಎಸ್. ಮನೋಹರ್, ಜಿ ಜನಾರ್ದನ್, ಈ. ಶೇಖರ್, ಎ.ಆನಂದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ