ಆ್ಯಪ್ನಗರ

ಕೇರಳದ ಮಳೆ ಸಂತ್ರಸ್ತರಿಗೆ ಸಚಿವ ಜಮೀರ್‌ ನೆರವು

ಕೇರಳದ ಅಲಪ್ಪುಳ ಜಿಲ್ಲೆಯ ಅಲೆಪ್ಪಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಂತ್ರಸ್ತರಾದ ಜನರಿಗೆ ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ವೈಯಕ್ತಿಕ ನೆರವು ನೀಡಿದ್ದಾರೆ.

Vijaya Karnataka 31 Jul 2018, 8:05 am
ಬೆಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಅಲೆಪ್ಪಿ ನಗರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಂತ್ರಸ್ತರಾದ ಜನರಿಗೆ ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ವೈಯಕ್ತಿಕ ನೆರವು ನೀಡಿದ್ದಾರೆ.
Vijaya Karnataka Web zamir helped to kerala
ಕೇರಳದ ಮಳೆ ಸಂತ್ರಸ್ತರಿಗೆ ಸಚಿವ ಜಮೀರ್‌ ನೆರವು


ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಮಳೆ ಸಂತ್ರಸ್ತರಿಗೆ ಆಹಾರ ಧಾನ್ಯಗಳನ್ನು ಕಳುಹಿಸಿಕೊಡುವಂತೆ ಮಾಡಿದ ಮನವಿ ಮೇರೆಗೆ 50 ಸಾವಿರ ಕೆ.ಜಿ. ಅಕ್ಕಿ, 10 ಸಾವಿರ ಕೆ.ಜಿ. ಸಕ್ಕರೆ ಹಾಗೂ 50 ಸಾವಿರ ಮಂದಿ ಊಟ ಮಾಡಬಹುದಾದ ಸಾಂಬಾರ್‌ ಪುಡಿಯನ್ನು ಮಾನವೀಯತೆ ನೆಲೆಯಲ್ಲಿ ಕಳುಹಿಸಿಕೊಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ