ಆ್ಯಪ್ನಗರ

ಜಿಂದಾಲ್‌ಗೆ ಭೂಮಿ ವಾಪಸ್‌ಗೆ ಆಗ್ರಹಿಸಿ ಇಂದು ಸಿಎಂ ಕಚೇರಿ ಕೃಷ್ಣಾಗೆ ಬಿಜೆಪಿ ಮುತ್ತಿಗೆ

ಬಳ್ಳಾರಿ ಜಿಲ್ಲೆಯಲ್ಲಿ ಜಿಂದಾಲ್‌ ಸಂಸ್ಥೆಗೆ ಭೂಮಿ ಪರಭಾರೆ ಮಾಡಿರುವುದನ್ನು ವಿರೋಧಿಸಿ ಹಾಗೂ ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ...

Vijaya Karnataka 16 Jun 2019, 5:00 am
ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಜಿಂದಾಲ್‌ ಸಂಸ್ಥೆಗೆ ಭೂಮಿ ಪರಭಾರೆ ಮಾಡಿರುವುದನ್ನು ವಿರೋಧಿಸಿ ಹಾಗೂ ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಬಿಜೆಪಿ ಶನಿವಾರವೂ ಅಹೋರಾತ್ರಿ ಧರಣಿ ಮುಂದುವರಿಸಿದ್ದು, ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
Vijaya Karnataka Web 1506-2-2-00B (8)


ನಗರದ ಆನಂದರಾವ್‌ ಸರ್ಕಲ್‌ನಲ್ಲಿರುವ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಪಕ್ಷದ ಇತರೆ ನಾಯಕರು ಹಾಗೂ ಕಾರ್ಯಕರ್ತರು ಶನಿವಾರವೂ ಪ್ರತಿಭಟನೆ ನಡೆಸಿ ಸರಕಾರದ ಕ್ರಮವನ್ನು ಖಂಡಿಸಿದರು. ಶನಿವಾರವೂ ಅಹೋರಾತ್ರಿ ಧರಣಿ ಮುಂದುವರಿಸಿ ಭಾನುವಾರ ಬೆಳಗ್ಗೆ ಮುಖ್ಯಮಂತ್ರಿ ಗೃಹ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ ಅಂತ್ಯಗೊಳಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಪ್ರತಿಭಟನೆ ಸ್ಥಳದಲ್ಲಿ ಹಾಕಿರುವ ಪೆಂಡಾಲ್‌ನಲ್ಲಿ ಯಡಿಯೂರಪ್ಪ , ಆರ್‌.ಅಶೋಕ್‌ ಸೇರಿದಂತೆ ಹಲವು ನಾಯಕರು ಮಲಗಿ ಧರಣಿ ಮುಂದುವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ , ''ಜಿಂದಾಲ್‌ ಸಂಸ್ಥೆ ನೀಡಿರುವ ಭೂಮಿ ಪರಭಾರೆಯನ್ನು ಕೂಡಲೇ ರದ್ದುಪಡಿಸಬೇಕು. ಈ ಕುರಿತು ಪರಿಶೀಲಿಸಲು ಸಚಿವ ಸಂಪುಟ ಉಪಸಮಿತಿ ರಚಿಸುವ ಅಗತ್ಯ ಇರಲಿಲ್ಲ. ಸರಕಾರ ಈ ವಿಚಾರದಲ್ಲಿ ದೊಂಬರಾಟವಾಡುತ್ತಿದೆ. ಇದಕ್ಕೆ ಬಿಜೆಪಿ ಅವಕಾಶ ಕೊಡುವುದಿಲ್ಲ,'' ಎಂದು ಎಚ್ಚರಿಸಿದರು.

ಶುಕ್ರವಾರ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಶನಿವಾರ ಬೆಳಗ್ಗೆ ಎದ್ದು ರೇಸ್‌ಕೋರ್ಸ್‌ ರಸ್ತೆಯಲ್ಲೇ ಆರ್‌.ಅಶೋಕ್‌ ಸೇರಿದಂತೆ ಹಲವು ನಾಯಕರು ವಾಕಿಂಗ್‌ ಮಾಡಿದರು. ಶಾಸಕ ರೇಣುಕಾಚಾರ್ಯ ಸೇರಿದಂತೆ ಹಲವರು ಪೆಂಡಾಲ್‌ನೊಳಗೆ ಯೋಗಾಸನ ಮಾಡಿದ್ದು ಸಾರ್ವಜನಿಕರ ಗಮನಸೆಳೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ