ಆ್ಯಪ್ನಗರ

ಜಿಂದಾಲ್‌ಗೆ ಭೂಮಿ: ಜಿಟಿಡಿ ಸಮರ್ಥನೆ

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ಸರಕಾರದ ಕ್ರಮವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಮರ್ಥಿಸಿಕೊಂಡರು.

Vijaya Karnataka 14 Jun 2019, 5:00 am
ಬೆಂಗಳೂರು : ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ಸರಕಾರದ ಕ್ರಮವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸಮರ್ಥಿಸಿಕೊಂಡರು.
Vijaya Karnataka Web zindal land g t devegowda justification
ಜಿಂದಾಲ್‌ಗೆ ಭೂಮಿ: ಜಿಟಿಡಿ ಸಮರ್ಥನೆ


ಎಫ್‌ಕೆಸಿಸಿಐ ಆಯೋಜಿಸಿದ್ದ 'ಮಂಥನ್‌-2019' ಸಮಾರಂಭದಲ್ಲಿ ಗುರುವಾರ ಮಾತನಾಡಿ ''ಜಿಂದಾಲ್‌ ಕಂಪನಿಗೆ 3,667 ಎಕರೆ ಜಮೀನನ್ನು ಕಾನೂನು ಪ್ರಕಾರವಾಗಿಯೇ ಮಂಜೂರು ಮಾಡಲಾಗಿದೆ. ಇದರಲ್ಲಿ ಯಾವುದೇ ತಪ್ಪು ನಡೆದಿಲ್ಲ. ಆದರೂ ಸರಕಾರದ ನಡೆ ತಪ್ಪು ಎಂದು ಬಿಂಬಿಸಿದ್ದು ಸರಿಯಲ್ಲ,'' ಎಂದರು.

''ರಾಜ್ಯದಲ್ಲಿ ಕೈಗಾರಿಕೆ ಬೆಳೆವಣಿಗೆಗೆ ಸಮ್ಮಿಶ್ರ ಸರಕಾರ ಪ್ರೋತ್ಸಾಹ ನೀಡುತ್ತಿದೆ. ಈ ಕ್ಷೇತ್ರದಲ್ಲಿ ಹೂಡಿಕೆಗೆ ಅವಕಾಶವಿದ್ದು, ಸಾಕಷ್ಟು ಉದ್ಯೋಗವಕಾಶ ಸೃಷ್ಟಿಯಾಗುತ್ತಿದೆ. ಇದನ್ನು ಅರಿತೇ ಹಿಂದಿನ ಸಿಎಂಗಳಾಗಿದ್ದ ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ಅವಧಿಯಲ್ಲೂ ಜಮೀನು ಮಂಜೂರಾತಿ ನೀಡಲಾಗಿದೆ. ಹೀಗಿರುವಾಗ ಸಮ್ಮಿಶ್ರ ಸರಕಾರದ ಕ್ರಮವನ್ನು ಮಾತ್ರ ವಿರೋಧಿಸುತ್ತಿರುವುದು ಏಕೆ,'' ಎಂದು ಪ್ರಶ್ನಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ