ಆ್ಯಪ್ನಗರ

ಎಡನೀರು ಶ್ರೀಗಳ 59ನೇ ಚಾತುರ್ಮಾಸ್ಯ ಸಂಪನ್ನ

ಜಗದ್ಗುರು ಆದಿಶಂಕರಾಚಾರ್ಯ ತೋಟಕಾಚಾರ್ಯ ಸಂಸ್ಥಾನದ ಶ್ರೀಮದ್‌ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ 59ನೇ ಚಾತುರ್ಮಾಸ್ಯ ವ್ರತಾಚರಣೆ ನಾನಾ ವಿಧಿ ವಿಧಾನಗಳೊಂದಿಗೆ ಶನಿವಾರ ಸಂಪನ್ನಗೊಂಡಿತು.

Vijaya Karnataka 15 Sep 2019, 5:00 am
ಬದಿಯಡ್ಕ: ಜಗದ್ಗುರು ಆದಿಶಂಕರಾಚಾರ್ಯ ತೋಟಕಾಚಾರ್ಯ ಸಂಸ್ಥಾನದ ಶ್ರೀಮದ್‌ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ 59ನೇ ಚಾತುರ್ಮಾಸ್ಯ ವ್ರತಾಚರಣೆ ನಾನಾ ವಿಧಿ ವಿಧಾನಗಳೊಂದಿಗೆ ಶನಿವಾರ ಸಂಪನ್ನಗೊಂಡಿತು.
Vijaya Karnataka Web edneeru sheer chaturmasya
ಎಡನೀರು ಶ್ರೀಗಳ 59ನೇ ಚಾತುರ್ಮಾಸ್ಯ ಸಂಪನ್ನ


ಶ್ರೀ ಮಠದಲ್ಲಿಶನಿವಾರ ಸಂಜೆ ನಡೆದ ಸಮಾರಂಭದಲ್ಲಿಮಠದ ಪರಿಸರದ ಮಧುವಾಹಿನಿ ನದೀ ತಟದಲ್ಲಿಮೂಲ ಮೃತ್ತಿಕಾ ವಿಸರ್ಜನೆ, ಸೀಮೋಲ್ಲಂಘಯೊಂದಿಗೆ ಜುಲೈ 25ರಿಂದ ಕೈಗೊಂಡಿದ್ದ 59ನೇ ಚಾತುರ್ಮಾಸ್ಯ ವ್ರತಾಚರಣೆ ಕೊನೆಗೊಂಡಿತು.

ಬೆಳಗ್ಗೆ ನಾನಾ ವೈದಿಕ ವಿಧಿ ವಿಧಾನಗಳು ನಡೆದು ಮಹಾಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ ನೆರವೇರಿತು. ಬಳಿಕ ಚಾತುರ್ಮಾಸ್ಯ ವ್ರತಾನುಷ್ಠಾನದ ಮೃತ್ತಿಕಾ ವಿಸರ್ಜನೆ ಹಾಗೂ ಎಡನೀರು ವಿಷ್ಣುಮಂಗಲ ಶ್ರೀ ಮಹಾವಿಷ್ಣು ದೇವಾಲಯದಲ್ಲಿಸೀಮೋಲ್ಲಂಘನದ ವಿಧಿಗಳನ್ನು ನೆರವೇರಿಸಲಾಯಿತು. ರಾತ್ರಿ ಮಹಾಪೂಜೆ, ಭಜನಾ ಮಂಗಲೋತ್ಸವ, ಗುರುವಂದನೆ, ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಕಾಸರಗೋಡು ಸಂಸದ ರಾಜ್‌ ಮೋಹನ್‌ ಉಣ್ಣಿತ್ತಾನ್‌ ಶ್ರೀ ಮಠ ಸಂದರ್ಶಿಸಿ ಶ್ರೀಗಳ ಅನುಗ್ರಹ ಪಡೆದರು. ಶ್ರೀ ಮಠದ ಭಕ್ತಾದಿಗಳು ಸಮಾರಂಭದಲ್ಲಿಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ