ಆ್ಯಪ್ನಗರ

ಕಣ್ಣೂರು ವಿಮಾನ ನಿಲ್ದಾಣದಿಂದ 2.8 ಕೆಜಿ ಚಿನ್ನ ವಶ

ಕತ್ತಾರ್‌ನಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನೊಬ್ಬನಿಂದ 2.8 ಕೆಜಿ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Vijaya Karnataka 11 Jul 2019, 5:00 am
ಕಾಸರಗೋಡು: ಕತ್ತಾರ್‌ನಿಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನೊಬ್ಬನಿಂದ 2.8 ಕೆಜಿ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
Vijaya Karnataka Web gold seized at kannuru airport
ಕಣ್ಣೂರು ವಿಮಾನ ನಿಲ್ದಾಣದಿಂದ 2.8 ಕೆಜಿ ಚಿನ್ನ ವಶ


ಬುಧವಾರ ಬೆಳಗ್ಗೆ ಕತ್ತಾರ್‌ನಿಂದ ಆಗಮಿಸಿದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಬಂದ ಪ್ರಯಾಣಿಕ ಕುನ್ನಮಂಗಲಂ ನಿವಾಸಿ ಶಬೀಬ್‌ ಎಂಬಾತನ ಬಳಿ ಚಿನ್ನ ಪತ್ತೆಯಾಗಿದೆ. ಈತ ಚಿನ್ನದ ಬಿಲ್ಲೆಯನ್ನು ತುಂಡು ತುಂಡಾಗಿಸಿ ಡ್ರಿಲ್ಲಿಂಗ್‌ ಮೆಷಿನ್‌ನೊಳಗೆ ಇಟ್ಟು ಸಾಗಿಸಲು ಯತ್ನಿಸಿದ್ದ.

ವಶಪಡಿಸಿದ ಚಿನ್ನದ ಮೌಲ್ಯ 98 ಲಕ್ಷ ರೂ. ಎಂದು ಕಸ್ಟಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ನಿಲ್ದಾಣ ಕಸ್ಟಮ್ಸ್‌ ಸಹಾಯಕ ಆಯುಕ್ತ ಒ. ಪ್ರದೀಪ್‌ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಚಿನ್ನ ವಶಪಡಿಸಿಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ