ಆ್ಯಪ್ನಗರ

ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಾವೇಶ

ಅಚ್ಚ ಗನ್ನಡ ಪ್ರದೇಶವಾದ ಗಡಿನಾಡು ಕಾಸರಗೋಡಿನಲ್ಲಿ ಹಲವು ಕಾರಣಗಳಿಂದ ದಿನದಿಂದ ದಿನಕ್ಕೆ ಕನ್ನಡ ಭಾಷೆ, ಸಂಸ್ಕೃತಿ ಅವನತಿಯತ್ತ ಸಾಗುತ್ತಿದೆ.

Vijaya Karnataka 23 Jul 2019, 5:00 am
ಕಾಸರಗೋಡು: ಅಚ್ಚ ಗನ್ನಡ ಪ್ರದೇಶವಾದ ಗಡಿನಾಡು ಕಾಸರಗೋಡಿನಲ್ಲಿ ಹಲವು ಕಾರಣಗಳಿಂದ ದಿನದಿಂದ ದಿನಕ್ಕೆ ಕನ್ನಡ ಭಾಷೆ, ಸಂಸ್ಕೃತಿ ಅವನತಿಯತ್ತ ಸಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗ ಎಚ್ಚೆತ್ತುಕೊಂಡು ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಲು ಹೋರಾಟ ನಡಸಬೇಕಾದ ಅನಿವಾರ್ಯತೆ ಎದುರಾಗಿದೆ. ಭಾಷೆ ಉಳಿದರೆ ಮಾತ್ರವೇ ಸಂಸ್ಕೃತಿ ಉಳಿಯಲು ಸಾಧ್ಯ. ಈ ಹಿನ್ನೆಲೆಯಲ್ಲಿ ಭಾಷೆಯನ್ನು ಉಳಿಸಿ, ಶಿಕ್ಷಣವನ್ನು ಪಡೆದುಕೊಂಡು ಸಂಸ್ಕೃತಿಯನ್ನು ಬೆಳೆಸೋಣ ಎಂದು ಎಣ್ಮಕಜೆ ಗ್ರಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಆಯಿಷಾ ಎ.ಎ.ಪೆರ್ಲ ಹೇಳಿದರು.
Vijaya Karnataka Web kasaragodu district kannada jagruti samaveaha
ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಾವೇಶ


ಕರ್ನಾಟಕ ನವ ನಿರ್ಮಾಣ ಸೇನೆ ಬೆಂಗಳೂರು ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡ ಗ್ರಾಮ ಸಹಯೋಗದಲ್ಲಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಆಯೋಜಿಸಿದ ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಾವೇಶ-2019 ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ, ಕನ್ನಡದೋಜ ಡಾ.ಕಯ್ಯಾರ ಕಿಞ್ಞಣ್ಣ ರೈ, ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬ ಮೊದಲಾದವರನ್ನು ಕೊಡುಗೆಯಾಗಿ ನೀಡಿದ ಕಾಸರಗೋಡು ಯಾವತ್ತೂ ಕನ್ನಡದ ನಾಡು. ಇಲ್ಲಿ ಕನ್ನಡದ ಕಂಪು ದಿನಾ ಪಸರಿಸಬೇಕು. ಕಾಸರಗೋಡಿನಲ್ಲಿ ಬೇರೆ ಬೇರೆ ಭಾಷೆಯನ್ನಾಡುತ್ತಿದ್ದರೂ ಎಲ್ಲರ ಸಂಸ್ಕೃತಿ ಕನ್ನಡ. ಕಾಸರಗೋಡು ಸಾಮರಸ್ಯಕ್ಕೂ ಮಾದರಿ ಪ್ರದೇಶ. ಅಂಗನವಾಡಿಗಳಲ್ಲಿ ಕನ್ನಡ ಬಲ್ಲ ಅಧ್ಯಾಪಕರನ್ನೇ ನೇಮಿಸಬೇಕು, ಸರಕಾರದ ಆದೇಶ, ಸುತ್ತೋಲೆಗಳೆಲ್ಲ ಕನ್ನಡದಲ್ಲೇ ಲಭಿಸುವಂತಾಗಬೇಕು. ಅದಕ್ಕೆ ಕನ್ನಡಿಗರೆಲ್ಲ ಒಂದೇ ಛತ್ರದಡಿ ಹೋರಾಟ ನಡೆಸಬೇಕಾಗಿದೆ ಎಂದರು.

ಕಾರ್ಯಕ್ರಮವನ್ನು ಕವಿ ಹರ್ಷಾದ್‌ ಉದ್ಘಾಟಿಸಿ ಮಾತನಾಡಿ, ಭಾಷೆ ಉಳಿವಿನ ಬಗ್ಗೆ ಆತಂಕದಲ್ಲಿದ್ದೇವೆ. ಬೇರೊಂದು ಪ್ರಭಾವಿ ಸಂಸ್ಕೃತಿಯತ್ತ ಮುಖ ಮಾಡುತ್ತಿರುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ. ಪ್ರಸ್ತುತ ಪುಸ್ತಕ ಓದುವುದನ್ನು ಬಿಟ್ಟಿದ್ದೇವೆ. ಮಾತನಾಡುವುದನ್ನು ಬಿಟ್ಟಿದ್ದೇವೆ. ಸಾಮಾಜಿಕ ಜಾಲ ತಾಣದಲ್ಲಿ ಮುಳುಗಿದ್ದೇವೆ. ಈ ಕಾರಣದಿಂದಲೂ ನಮ್ಮ ಭಾಷೆ, ಸಂಸ್ಕೃತಿ ಮರೆತು ಹೋಗುವಂತಾಗುತ್ತಿದೆ. ಈ ಹಿನ್ನೆಲೆಯಲ್ಲಿ ಓದುವ ಮತ್ತು ಮಾತನಾಡುವ ಸವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಸರಗೋಡು ನಗರಸಭೆ ಸದಸ್ಯ ಶಂಕರ ಕೆæ, ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕೆ., ಕೋಟೆಕಣಿಯ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಸಂಚಾಲಕ ಗುರುಪ್ರಸಾದ್‌ ಕೋಟೆಕಣಿ, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ತಾರಾನಾಥ ಬೋಳಾರು, ಕೆಸಿಎನ್‌ ಚಾನೆಲ್‌ ನಿರ್ದೇಶಕ ಪುರುಷೋತ್ತಮ ನಾೖಕ್‌ ಶುಭಹಾರೈಸಿದರು.

ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಆಶಯ ಭಾಷಣ ಮಾಡಿದರು.

ಈ ಸಂದರ್ಭದಲ್ಲಿ ಪ್ರೇಮಲತಾ ಗೋಕುಲದಾಸ್‌ ಕುಂಬಳೆ ಅವರನ್ನು ಗೌರವಿಸಲಾಯಿತು.

ಸಮಾವೇಶದ ಬಳಿಕ ಗಡಿನಾಡ ಚುಟುಕು ಕವಿಗೋಷ್ಠಿ ನಡೆಯಿತು. ಕರಾವಳಿ ಕಾವ್ಯ ಸೌರಭ, ಕರಾವಳಿ ಸಾಂಸ್ಕೃತಿಕ ವೈಭವ, ನೃತ್ಯ ವೈವಿಧ್ಯ, ಕರಾವಳಿ ಸಂಕೀರ್ತನಾ ವೈವಿಧ್ಯ, ಚಿತ್ರಕಲಾ ಪ್ರದರ್ಶನ ಮೊದಲಾದವು ನಡೆಯಿತು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು ಸ್ವಾಗತಿಸಿದರು. ಸಂಘಟಕ ಜಗದೀಶ್‌ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಅಧ್ಯಕ್ಷ ಸತ್ಯನಾರಾಯಣ ಕಾಸರಗೋಡು ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ