ಆ್ಯಪ್ನಗರ

16ರಿಂದ ಕೊಂಡೆವೂರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಆರಂಭ

ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ತಮ್ಮ 16ನೇ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಜು.16ರಿಂದ ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿದ್ದಾರೆ.

Vijaya Karnataka 14 Jul 2019, 5:00 am
ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ ಅವರು ತಮ್ಮ 16ನೇ ಚಾತುರ್ಮಾಸ್ಯ ವ್ರತ ಸಂಕಲ್ಪವನ್ನು ಜು.16ರಿಂದ ಕೊಂಡೆವೂರು ಮಠದಲ್ಲಿ ಕೈಗೊಳ್ಳಲಿದ್ದಾರೆ.
Vijaya Karnataka Web kondevooru shree chaturmasya
16ರಿಂದ ಕೊಂಡೆವೂರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಆರಂಭ


ಅಂದು ಬೆಳಗ್ಗೆ 8.30ಕ್ಕೆ ಗಣಹೋಮ, 9.30ಕ್ಕೆ ಶ್ರೀ ನಿತ್ಯಾನಂದ ಗುರುದೇವರಿಗೆ ಪಂಚಾಮೃತಾಭಿಷೇಕ, 10.30ಕ್ಕೆ ವ್ಯಾಸಪೂಜೆ ಆರಂಭವಾಗಿ 12ಕ್ಕೆ ಮಂಗಳಾರತಿ, 12.30ಕ್ಕೆ ಮಹಾಪೂಜೆ ನಂತರ ಅನ್ನಪ್ರಸಾದ ನಡೆಯಲಿದೆ. ಖಗ್ರಾಸ ಚಂದ್ರಗ್ರಹಣ ಪ್ರಯುಕ್ತ ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ.

ಜು.17ರಂದು ಬುಧವಾರ ಸಂಜೆ 7ಕ್ಕೆ ಶ್ರೀ ಗುರುಪಾದುಕಾ ಪೂಜೆ, ಭಜನೆ ನಂತರ ಸ್ವಾಮೀಜಿಯವರಿಂದ ಸತ್ಸಂಗ ನಡೆದು ಅನುಗ್ರಹ ಮಂತ್ರಾಕ್ಷ ತೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಭಕ್ತಾದಿಗಳಿಂದ ಭಗವಾನ್‌ ಶ್ರೀನಿತ್ಯಾನಂದ ಗುರುದೇವರಿಗೆ ರಜತ ಪಾದುಕೆ ಸಮರ್ಪಣೆ ನಡೆಯಲಿದೆ.

ಸೆ.14ರಂದುಸಂಪನ್ನಗೊಳ್ಳಲಿರುವ ಚಾತುರ್ಮಾಸ್ಯದ ಈ ಸತ್ಸಂದರ್ಭದಲ್ಲಿ ಪ್ರತಿ ಭಾನುವಾರ ಸಂಜೆ 3ರಿಂದ 5ರವರೆಗೆ ಯೋಗಾಭ್ಯಾಸ, ಸಾಮೂಹಿಕ ವಿಷ್ಣುಸಹಸ್ರನಾಮ ಪಾರಾಯಣ, ಭಜನೆ ಹಾಗೂ ಸತ್ಸಂಗಗಳನ್ನು ಆಯೋಜಿಸಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ