ಆ್ಯಪ್ನಗರ

ಐಲದಲ್ಲಿ ಲಕ್ಷ ದೀಪೋತ್ಸವ

ದೀಪದ ಬೆಳಕಿನಲ್ಲಿ ದೇವರನ್ನು ಕಾಣುವ ಮೂಲಕ ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನ ಕಡೆಗೆ ನಾವೆಲ್ಲರೂ ಸಾಗೋಣ ಎಂದು ಕಟೀಲು ಶ್ರೀ ದುರ್ಗಾಪರಮೆಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ಹೇಳಿದರು.

Vijaya Karnataka Web 27 Mar 2018, 5:00 am
ಮಂಜೇಶ್ವರ: ದೀಪದ ಬೆಳಕಿನಲ್ಲಿ ದೇವರನ್ನು ಕಾಣುವ ಮೂಲಕ ಅಜ್ಞಾನದ ಅಂಧಕಾರದಿಂದ ಜ್ಞಾನದ ಬೆಳಕಿನ ಕಡೆಗೆ ನಾವೆಲ್ಲರೂ ಸಾಗೋಣ ಎಂದು ಕಟೀಲು ಶ್ರೀ ದುರ್ಗಾಪರಮೆಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ಹೇಳಿದರು.
Vijaya Karnataka Web laksha deepootsava at ila temple
ಐಲದಲ್ಲಿ ಲಕ್ಷ ದೀಪೋತ್ಸವ


ಭಾನುವಾರ ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಪರಿಸರದಲ್ಲಿ ಉಪ್ಪಳದ ಸಾಮಾಜಿಕ ಸಂಸ್ಥೆ ಅಗ್ನಿ ಪ್ರೆಂಡ್ಸ್‌ ಕ್ಲಬ್‌ನ ದಶಮಾನೋತ್ಸವದ ಅಂಗವಾಗಿ ನಡೆದ ಲಕ್ಷ ದೀಪೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ಡಾ. ಎಂ. ಶ್ರೀಧರ ಭಟ್‌ ಅಧ್ಯಕ್ಷ ತೆ ವಹಿಸಿದ್ದರು. ಉದ್ಯಾವರ ಮಾಡ ಅರಸು ಮಂಜಿಷ್ಣಾರ್‌ ಕ್ಷೇತ್ರದ ದೈವಪಾತ್ರಿ ರಾಜ ಬೆಳ್ಚಪ್ಪಾಡ ಗೌರವ ಅತಿಥಿಯಾಗಿದ್ದರು. ಮುಖ್ಯ ಅತಿಥಿಗಳಾಗಿ ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್‌, ಬಡಿಯಡ್ಕದ ಉಪ್ಲೇರಿಯ ವಿಷ್ಣುಮೂರ್ತಿ ಗುಳಿಗ ಸನ್ನಿಧಿಯ ಪ್ರಧಾನ ಕರ್ಮಿ ಗೋಪಾಲಕೃಷ್ಣ ಕುಲಾಲ್‌ ವಾಂತಿಚ್ಚಾಲು, ಐಲ ದುರ್ಗಾಪರಮೇಶ್ವರಿ ಕ್ಷೇತ್ರ ಮೊಕ್ತೇಸರರಾದ ಕೃಷ್ಣಪ್ಪ ಐಲ, ಅಂಬಾರು ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣಪ್ಪ ಪೂಜಾರಿ ದೇರಂಬಳ, ಗೋರಕ್ಷಾ ಪ್ರಮುಖ್‌ ಗೋಪಾಲ ಶೆಟ್ಟಿ ಅರಿಬೈಲು, ಉದ್ಯಮಿ ಪಿ.ಆರ್‌. ಶೆಟ್ಟಿ ಪೊಯ್ಯೆಲು, ಉಪ್ಪಳದ ವಾಮಂಜೂರು ಗುತ್ಯಮ್ಮ ಭಗವತಿ ಕ್ಷೇತ್ರದ ಅಧ್ಯಕ್ಷ ಸುಕುಮಾರ ಉಪ್ಪಳ, ಮಂಗಲ್ಪಾಡಿ ಬಂಟರ ಸಂಘದ ಅಧ್ಯಕ್ಷ ಶ್ರೀಧರ ಶೆಟ್ಟಿ ಯಾಮಿನಿ ಎಸ್ಟೇಟ್‌, ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಕೋಳಾರು ಸತೀಶ್ಚಂದ್ರ ಭಂಡಾರಿ, ಒಬಿಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ, ನ್ಯಾಯವಾದಿ ನವೀನ್‌ ರಾಜ್‌, ಲಕ್ಷ ದೀಪೋತ್ಸವ ಸಮಿತಿ ಅಧ್ಯಕ್ಷ ವಲ್ಸರಾಜ್‌ ಕೆ.ಪಿ., ಅಗ್ನಿ ಫ್ರೆಂಡ್ಸ್‌ ಕ್ಲಬ್‌ ಅಧ್ಯಕ್ಷ ಲೋಹಿತ್‌ ಕುಮಾರ್‌ ಉಪ್ಪಳ ಮೊದಲಾದವರು ಉಪಸ್ಥಿತರಿದ್ದರು.

ರಕ್ಷಿತ, ಲವ್ಯಶ್ರೀ ಕೊಕ್ಕೆಚ್ಚಾಲ್‌ ಪ್ರಾರ್ಥನೆ ಹಾಡಿದರು. ಹರೀಶ್‌ ಶೆಟ್ಟಿ ಮಾಡ ಸ್ವಾಗತಿಸಿದರು, ಪದ್ಮ ಮೋಹನದಾಸ್‌ ವಂದಿಸಿದರು. ರವೀಂದ್ರ ಅಡ್ಕ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಮಂದಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದೀಪೋತ್ಸವ ಸಾಹಿತ್ಯ ಶಿಖೋಜ್ವಲನೆ ಕವಿ, ಕಾವ್ಯ, ವಾಚನ, ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ತುಳು ಕನ್ನಡ ಸಾಹಿತ್ಯ ಪ್ರಸಂಗಕರ್ತ ಯೋಗೀಶ್‌ ರಾವ್‌ ಚಿಗುರುಪಾದೆ ವಹಿಸಿದ್ದರು.

ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಜನತೆಗೆ ಲಭಿಸುವ ಅನುದಾನ ಮತ್ತು ಇನ್ನಿತರ ಮಾಹಿತಿಗಳನ್ನು ಮಂಗಲ್ಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಕೆ. ಮೋಹನನ್‌ ತಿಳಿಸಿದರು. ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ