ಆ್ಯಪ್ನಗರ

22ರಂದು ಕನ್ನಡಿಗರ ಪ್ರತಿಭಟನಾ ಧರಣಿ

ಭಾಷಾ ಅಲ್ಪಸಂಖ್ಯಾತ ಪ್ರದೇಶ ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳು ಹಾಗೂ ಪರಿಹಾರದ ಬಗ್ಗೆ ಜನ ಜಾಗೃತಿಗಾಗಿ ಪ್ರಬಲ ಹೋರಾಟ ನಡೆಸಲು ಬೀರಂತಬೈಲು ಕನ್ನಡ ಅಧ್ಯಾಪಕ ಭವನದಲ್ಲಿ ನಡೆದ ಕನ್ನಡ ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.

Vijaya Karnataka 9 Jun 2019, 5:00 am
ಕಾಸರಗೋಡು: ಭಾಷಾ ಅಲ್ಪಸಂಖ್ಯಾತ ಪ್ರದೇಶ ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳು ಹಾಗೂ ಪರಿಹಾರದ ಬಗ್ಗೆ ಜನ ಜಾಗೃತಿಗಾಗಿ ಪ್ರಬಲ ಹೋರಾಟ ನಡೆಸಲು ಬೀರಂತಬೈಲು ಕನ್ನಡ ಅಧ್ಯಾಪಕ ಭವನದಲ್ಲಿ ನಡೆದ ಕನ್ನಡ ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು.
Vijaya Karnataka Web on 22nd kannadigas protest
22ರಂದು ಕನ್ನಡಿಗರ ಪ್ರತಿಭಟನಾ ಧರಣಿ


ರಾಜ್ಯ ಭಾಷಾ ಅಲ್ಪಸಂಖ್ಯಾತ ಸಮಿತಿಯಿಂದ ಕನ್ನಡ ಪ್ರತಿನಿಧಿಯನ್ನು ಕೈಬಿಟ್ಟ ಕ್ರಮ ಹಿಂತೆಗೆದು ಕೂಡಲೇ ಪ್ರತಿನಿಧಿಯನ್ನು ಸೇರಿಸಬೇಕು. ಪ್ರೌಢಶಾಲೆ ಮತ್ತು ಉನ್ನತ ಪ್ರೌಢಶಾಲೆ ಏಕೀಕರಿಸುವ ಸಂದರ್ಭದಲ್ಲಿ ಕನ್ನಡಿಗರ ಹಿತರಕ್ಷ ಣೆ ಕಾಯಬೇಕು. ಕನ್ನಡಿಗರಿಗೆ ಮೀಸಲಿರಿಸಿದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಭಾಷಾ ಅಲ್ಪಸಂಖ್ಯಾತ ಪ್ರದೇಶದಲ್ಲಿ ಅಂಗನವಾಡಿ ಮೇಲ್ವಿಚಾರಕಿಯಾಗಿ ಕನ್ನಡಿಗರನ್ನೇ ಮೀಸಲು ಮೂಲಕ ನೇಮಕ ಮಾಡÜಲು ಕಾನೂನಿಗೆ ತಿದ್ದುಪಡಿ ತರಬೇಕು, ಅವಿಭಜಿತ ಕಾಸರಗೋಡು ತಾಲೂಕಿನಿಂದ ಬೇರ್ಪಟ್ಟ ಮಂಜೇಶ್ವರ ತಾಲೂಕಿಗೆ ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕು ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜೂ. 22ರಂದು ಬೆಳಗ್ಗೆ 10ಕ್ಕೆ ಕಾಸರಗೋಡು ಹೊಸ ಬಸ್‌ ನಿಲ್ದಾಣ ಪರಿಸರದಲ್ಲಿ ಬೃಹತ್‌ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಯಿತು.

ಗ್ರಾಮ ಮಟ್ಟದಲ್ಲಿ ರಾಜಕೀಯೇತರವಾಗಿ ಕನ್ನಡಿಗರನ್ನು ಒಗ್ಗೂಡಿಸಿ ಬಲಿಷ್ಠವಾದ ಸಂಘಟನೆ ರಚಿಸಲು ತೀರ್ಮಾನಿಸಲಾಯಿತು. ಕನ್ನಡ ಪ್ರದೇಶದ ಎಲ್ಲ ಗ್ರಾಪಂ ಮಟ್ಟದಲ್ಲಿ ಪ್ರಾದೇಶಿಕ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಯಿತು. ಅದೇ ರೀತಿ ಹೊಸದುರ್ಗ ತಾಲೂಕು ಮಟ್ಟದಲ್ಲಿ ಕನ್ನಡ ಭಾಷಾಭಿಮಾನಿಗಳನ್ನು ಒಟ್ಟು ಸೇರಿಸಿ ಸಕ್ರಿಯಗೊಳಿಸಲು ತೀರ್ಮಾನಿಸಲಾಯಿತು.

ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಮಹಾಲಿಂಗೇಶ್ವರ ಭಟ್‌, ಬಾಲಕೃಷ್ಣ ಅಗ್ಗಿತ್ತಾಯ, ತಾರನಾಥ ಮಧೂರು, ಎಸ್‌.ವಿ. ಭಟ್ಟ, ಕೆ. ವಿಶ್ವನಾಥ ರಾವ್‌, ಕೆ. ವಾಸುದೇವ, ದಿನೇಶ ಚೆರುಗೋಳಿ, ಸತೀಶ್‌ ಕೂಡ್ಲು, ಎನ್‌. ಶೋಭಾ, ರಾಮಮೂರ್ತಿ, ಬೇಸೀ ಗೋಪಾಲಕೃಷ್ಣ ಭಟ್‌, ಡಾ. ಯು. ಮಹೇಶ್ವರಿ, ಸುಬ್ರಹ್ಮಣ್ಯ ನಾಯಕ್‌, ಭಾಸ್ಕರ ಕಾಸರಗೋಡು ಮತ್ತಿತರರು ಸಭೆಯಲ್ಲಿ ಅಭಿಪ್ರಾಯಮಂಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ