ಆ್ಯಪ್ನಗರ

ಅನಧಿಕೃತ ಜಾಹೀರಾತು ಫಲಕಗಳ ತೆರವಿಗೆ ಸೂಚನೆ

ಜಿಲ್ಲೆಯ ರಸ್ತೆ ಬದಿಗಳಲ್ಲಿ ಸ್ಥಾಪಿಸಿರುವ ಅನಧಿಕೃತ ಜಾಹೀರಾತು ಫಲಕಗಳನ್ನು, ಫ್ಲ್ಲೆಕ್ಸ್‌ ಬೋರ್ಡ್‌ಗಳನ್ನು ಕೂಡಲೇ ತೆರವುಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಭಿವೃದ್ಧಿ ಸಮಿತಿ ಸಭೆ ಲೋಕೋಪಯೋಗಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ಗೆ ಸೂಚನೆ ನೀಡಿದೆ.

Vijaya Karnataka 30 Sep 2018, 5:00 am
ಕಾಸರಗೋಡು: ಜಿಲ್ಲೆಯ ರಸ್ತೆ ಬದಿಗಳಲ್ಲಿ ಸ್ಥಾಪಿಸಿರುವ ಅನಧಿಕೃತ ಜಾಹೀರಾತು ಫಲಕಗಳನ್ನು, ಫ್ಲ್ಲೆಕ್ಸ್‌ ಬೋರ್ಡ್‌ಗಳನ್ನು ಕೂಡಲೇ ತೆರವುಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಭಿವೃದ್ಧಿ ಸಮಿತಿ ಸಭೆ ಲೋಕೋಪಯೋಗಿ ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ಗೆ ಸೂಚನೆ ನೀಡಿದೆ.
Vijaya Karnataka Web order to vacate illegal flex
ಅನಧಿಕೃತ ಜಾಹೀರಾತು ಫಲಕಗಳ ತೆರವಿಗೆ ಸೂಚನೆ


ಹೊಸಂಗಡಿಯಿಂದ ಕುಂಬಳೆ ತನಕವಿರುವ ಬೋರ್ಡ್‌ಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಉಳಿದವುಗಳನ್ನು ತೆರವುಗೊಳಿಸಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಬೇಕಲ, ಪನೆಯಾಲ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅನಧಿಕೃತ ಒತ್ತುವರಿಯನ್ನು ತೆರವುಗೊಳಿಸಲಾಗುವುದು. ಸಣ್ಣ ದುರಸ್ತಿ ಕಾಮಗಾರಿ ನಡೆಸಲು ಸಾಧ್ಯವಾಗುವಂತಹ ಸೇತುವೆಗಳಿದ್ದರೆ ಜನಪ್ರತಿನಿಧಿಗಳು ಈ ಕುರಿತು ಮಾಹಿತಿಯನ್ನು ಜಿಲ್ಲಾಧಿಕಾರಿಗೆ ಕೂಡಲೇ ಸಲ್ಲಿಸಬೇಕು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ವೀರ ಮಾಡಕಲ್ಲು ಪ್ರವಾಸೋದ್ಯಮಕ್ಕಾಗಿರುವ ಕ್ರಮ ಕೂಡಲೇ ಆರಂಭಿಸಲಾಗುವುದು.

ಮಾಡಕಲ್ಲು ಸಾರಿಗೆ ಸಮಸ್ಯೆ ಪರಿಹರಿಸಲು ಜಿಇಎಂನಲ್ಲಿ ನೋಂದಾಯಿಸಿದ ಬೋಟ್‌ಗಳನ್ನು ಪಡೆಯಲಾಗುವುದು. ಎಂಎಲ್‌ಎ, ಎಸ್‌ಡಿಎಫ್‌, ಫ್ಲಡ್‌ ಯೋಜನೆಗಳಲ್ಲಿ ಜಾರಿಗೊಳಿಸುವ ಯೋಜನೆಗಳ ಪ್ರಗತಿಯ ಬಗ್ಗೆ ವರದಿಯನ್ನು ಪ್ರತಿ ತಿಂಗಳ ಐದನೇ ತಾರೀಕಿನೊಳಗೆ ಲಭ್ಯವಾಗಿಸಲು ಕ್ರಮ ಕೈಗೊಳ್ಳಬೇಕು. ಚಟ್ಟಂಚಾಲ್‌ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಭೂ ಒತ್ತುವರಿ ನಡೆಸಿ ನಿರ್ಮಿಸಿದ ತಾತ್ಕಾಲಿಕ ಶೆಡ್‌ನ್ನು ತೆರವುಗೊಳಿಸಲಾಗುವುದು. ಶಾಸಕರ ಪ್ರಾದೇಶಿಕ ನಿಧಿಯಿಂದ ಬೇಕಲ ಪೋರ್ಟ್‌ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಮಂಜೂರುಗೊಳಿಸಿದ 131ಲಕ್ಷ ರೂ. ಈ ತನಕ ರೈಲ್ವೆಗೆ ಹಸ್ತಾಂತರಿಸಿಲ್ಲ. ಅದನ್ನು ಮುಂದಿನ 10 ದಿನಗಳೊಳಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

ನಾನಾ ಪ್ರದೇಶಗಳಲ್ಲಿ ಲೋಕೋಪಯೋಗಿ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ಹಂಪ್‌ಗಳನ್ನು ತೆರವುಗೊಳಿಸಲಾಗುವುದು. ಈ ಕುರಿತು ಅಧ್ಯಯನ ನಡೆಸಲು ಒಂದು ಸಮಿತಿಗೆ ಅಧಿಕಾರ ನೀಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಶಾಸಕ ಪಿ.ಬಿ. ಅಬ್ದುಲ್‌ ರಝಾಕ್‌, ಎನ್‌.ಎ. ನೆಲ್ಲಿಕುನ್ನು, ಎಂ. ರಾಜಗೋಪಾಲನ್‌, ಕೆ. ಕುಂಞಿರಾಮನ್‌, ಜಿಪಂ ಅಧ್ಯಕ್ಷ ಎಜಿಸಿ ಬಶೀರ್‌, ಜಿಪಂ ಉಪಾಧ್ಯಕ್ಷೆ ಶಾಂತಮ್ಮ ಫಿಲಿಪ್‌, ಎಡಿಎಂ ಎನ್‌. ದೇವಿದಾಸ್‌, ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷ ರು, ನಾನಾ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ