ಆ್ಯಪ್ನಗರ

ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್‌ನಲ್ಲಿ ಕಾಸರಗೋಡಿಗೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಸರಗೋಡು ಜಿಲ್ಲೆಗೆ ಮತ್ತೆ ಆಗಮಿಸಲಿದ್ದಾರೆ.

Vijaya Karnataka 28 Jul 2018, 5:00 am
ಕಾಸರಗೋಡು: ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಸರಗೋಡು ಜಿಲ್ಲೆಗೆ ಮತ್ತೆ ಆಗಮಿಸಲಿದ್ದಾರೆ. ಡಿಸೆಂಬರ್‌ ತಿಂಗಳಲ್ಲಿ ನೀಲೇಶ್ವರ ಕೇಂದ್ರೀಯ ವಿದ್ಯಾಲಯದ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವುದಾಗಿ ಕೇಂದ್ರೀಯ ವಿದ್ಯಾಲಯದ ಕೇಂದ್ರದಿಂದ ಸಂಬಂಧಪಟ್ಟವರಿಗೆ ಮಾಹಿತಿ ಲಭಿಸಿದೆ. ಇದರೊಂದಿಗೆ ಕೇರಳದ ಪತ್ತನಂತಿಟ್ಟ, ಕೊಲ್ಲಂಗಳ ಕೇಂದ್ರೀಯ ವಿದ್ಯಾಲಯಗಳ ಕಟ್ಟಡ ಉದ್ಘಾಟನೆಯಲ್ಲೂ ಭಾಗವಹಿಸುವರು.
Vijaya Karnataka Web pm visits kasaragod ondecember
ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್‌ನಲ್ಲಿ ಕಾಸರಗೋಡಿಗೆ


ಈ ಕುರಿತು ಕೇಂದ್ರೀಯ ವಿದ್ಯಾಲಯಗಳ ಎಲ್ಲ ವಲಯ ಅಧಿಕೃತರಿಗೆ ಮಾಹಿತಿ ನೀಡಲಾಗಿದೆ. ನೀಲೇಶ್ವರ ಕೇಂದ್ರೀಯ ವಿದ್ಯಾಲಯದ ಕಟ್ಟಡ ನಿರ್ಮಾಣಕ್ಕಾಗಿ ನ್ಯಾಷನಲ್‌ ಪ್ರಾಜೆಕ್ಟ್ ಕನ್‌ಸ್ಟ್ರಕ್ಷ ನ್‌ ಕಾರ್ಪೊರೇಶನ್‌ ಲಿಮಿಟೆಡ್‌ಗೆ ಜವಾಬ್ದಾರಿ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು 2016ರ ಮೇ 8ರಂದು ವಿಧಾನಸಭೆ ಚುನಾವಣಾ ಪ್ರಚಾರಕ್ಕಾಗಿ ಕಾಸರಗೋಡಿಗೆ ಆಗಮಿಸಿದ್ದರು. 2014ರ ಏ.8ರಂದು ಲೋಕಸಭೆ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲೂ ಮೋದಿ ಕಾಸರಗೋಡಿಗೆ ಆಗಮಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ