ಆ್ಯಪ್ನಗರ

ಅತಿರಾತ್ರ ಸೋಮಯಾಗ ಯಶಸ್ಸಿಗೆ ದೇವಾಲಯಗಳಲ್ಲಿ ಪ್ರಾರ್ಥನೆ

ಅತಿರಾತ್ರ ಸೋಮಯಾಗದ ಪ್ರಯುಕ್ತ ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ದೇವಸ್ಥಾನಗಳಿಗೆ ಭೇಟಿ ನೀಡಿದರು.

Vijaya Karnataka 10 Feb 2019, 5:00 am
ಮಂಜೇಶ್ವರ: ಕೊಂಡೆವೂರು ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರ ತನಕ ನಡೆಯಲಿರುವ ಅತಿರಾತ್ರ ಸೋಮಯಾಗದ ಪ್ರಯುಕ್ತ ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ವಿಶ್ವಜಿತ್‌ ಅತಿರಾತ್ರ ಯಾಗದ ಸಂಪೂರ್ಣ ಯಶಸ್ಸಿಗೆ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮುಳಿಂಜ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಅಂಬಾರು ಶ್ರೀ ಸದಾಶಿವ ದೇವಸ್ಥಾನ, ಸೀರೆ ಶ್ರೀ ಶಂಕರನಾರಾಯಣ ದೇವಸ್ಥಾನ, ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ಯಜ್ಞೇಶ್ವರನಿಗೆ ಸಮರ್ಪಿಸಲಾಗುವ ಕುಟ್ಟಿದ ಸಾವಯವ ಅಕ್ಕಿಯನ್ನು ದೇವಾಲಯಗಳಿಗೆ ಸಮರ್ಪಿಸಿದರು. ದೇವಾಲಯ ಭೇಟಿ ಸಂದರ್ಭ ಯಾಗ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
Vijaya Karnataka Web somayaga prayaers at temples
ಅತಿರಾತ್ರ ಸೋಮಯಾಗ ಯಶಸ್ಸಿಗೆ ದೇವಾಲಯಗಳಲ್ಲಿ ಪ್ರಾರ್ಥನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ