ಆ್ಯಪ್ನಗರ

ನೆಕ್ರಾಜೆ ದೇವಳ ಗರ್ಭಗುಡಿಗೆ ಶಿಲೆ ಆಗಮನ

ನೆಕ್ರಾಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ನಿರ್ಮಾಣ ಕಾರ್ಯಗಳಿಗಾಗಿ ಕರ್ನಾಟಕದ ಕಾರ್ಕಳದಿಂದ ತರಿಸಲಾದ ಶಿಲೆಯನ್ನು ಭಕ್ತಾದಿಗಳು ಮೆರವಣಿಗೆ ಮೂಲಕ ಶ್ರೀ ಕ್ಷೇತ್ರಕ್ಕೆ ಬರಮಾಡಿಕೊಂಡರು.

Vijaya Karnataka 15 Jun 2019, 5:00 am
ಬದಿಯಡ್ಕ: ನೆಕ್ರಾಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ನಿರ್ಮಾಣ ಕಾರ್ಯಗಳಿಗಾಗಿ ಕರ್ನಾಟಕದ ಕಾರ್ಕಳದಿಂದ ತರಿಸಲಾದ ಶಿಲೆಯನ್ನು ಭಕ್ತಾದಿಗಳು ಮೆರವಣಿಗೆ ಮೂಲಕ ಶ್ರೀ ಕ್ಷೇತ್ರಕ್ಕೆ ಬರಮಾಡಿಕೊಂಡರು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಿ. ವಸಂತ ಪೈ ಬದಿಯಡ್ಕ ಮಾತನಾಡಿ, ಗ್ರಾಮದ ದೇವಾಲಯ ಸೀಮೆಯ ಪ್ರಸಿದ್ಧ ಕಾರಣಿಕದ ಕ್ಷೇತ್ರವಾಗಿದೆ. ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಶಾಶ್ವತ ಚಪ್ಪರ, ಸುಸಜ್ಜಿತ ಅಡುಗೆ ಶಾಲೆ, ನೆಲಕ್ಕೆ ಹಾಸುಗಲ್ಲು, ಕಾರ್ಯಾಲಯ, ಶಾಶ್ವತ ವೇದಿಕೆ, ನೀರಿನ ಟ್ಯಾಂಕ್‌, ಶೌಚಾಲಯ ಮುಂತಾದ ಕೆಲಸಗಳು ನಡೆಯಬೇಕಿದೆ. ನೆಕ್ರಾಜೆ ನಿವಾಸಿಗಳು ಕಠಿಣ ಪರಿಶ್ರಮ ಮತ್ತು ದೇವರ ಕೆಲಸದಲ್ಲಿ ತೋರುತ್ತಿರುವ ಉತ್ಸಾಹದಿಂದ ಕೆಲಸ ಕಾರ್ಯಗಳು ಪ್ರಗತಿಯಲ್ಲಿದ್ದು,ಶ್ರೀ ದೇವರ ಪುನರ್‌ ಪ್ರತಿಷ್ಠಾ ಕಾರ್ಯಕ್ರಮವನ್ನು ನಾವೆಲ್ಲ ಕಾಣಲಿದ್ದೇವೆ ಎಂದು ಹೇಳಿದರು.
Vijaya Karnataka Web stone for nekfraje temple santrum
ನೆಕ್ರಾಜೆ ದೇವಳ ಗರ್ಭಗುಡಿಗೆ ಶಿಲೆ ಆಗಮನ


ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಂಕರನಾರಾಯಣ ಮಯ್ಯ, ಕಾರ್ಯದರ್ಶಿ ಗಣೇಶ ವತ್ಸ ನೆಕ್ರಾಜೆ, ಅನುವಂಶಿಕ ಮೊಕ್ತೇಸರ ನೆಕ್ರಾಜೆ ಸೀತಾರಾಮ ಶೆಟ್ಟಿ, ಸೇವಾ ಸಮಿತಿ ಅಧ್ಯಕ್ಷ ಗಂಗಾಧರ ಮಣಿಯಾಣಿ ನೆಲ್ಲಿತ್ತಲ, ರತ್ನಾಕರ ಮಾವಿನಕಟ್ಟೆ, ಗೋಪಾಲ ಭಟ್‌ ಕೋಳಾರಿ ಮತ್ತು ಶ್ರೀಕ್ಷೇತ್ರದ ಮಹಿಳಾ ಸಂಘ ನೆಕ್ರಾಜೆ, ಶ್ರೀ ಗೋಪಾಲಕೃಷ್ಣ ಭಜನಾ ಸಂಘ ಮತ್ತು ಸಂಘ ಸಂಸ್ಥೆಗಳ ಹಾಗೂ ಕ್ಲಬ್‌ಗಳ ಸದಸ್ಯರು ಉಪಸ್ಥಿತರಿದ್ದರು.

*ನೂತನ ಶಿಲಾಮಯ ಗರ್ಭಗುಡಿಯ ಕೆಲಸಗಳು ಸದ್ಯದಲ್ಲೇ ಪ್ರಾರಂಭವಾಗಲಿದೆ. ಅತಿ ಶೀಘ್ರದಲ್ಲಿ ಜೀರ್ಣೋದ್ಧಾರ ಕಾರ್ಯಗಳನ್ನು ಪೂರೈಸಬೇಕೆಂಬ ಸಂಕಲ್ಪ ನಮ್ಮ ಮುಂದಿದೆ. ಊರ ಪರವೂರ ಜನರ ಸಂಪೂರ್ಣ ಸಹಕಾರದ ಅಗತ್ಯವಿದೆ

-ಗಣೇಶ ವತ್ಸ ನೆಕ್ರಾಜೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ