ಆ್ಯಪ್ನಗರ

ಮಧೂರು ಕ್ಷೇತ್ರಕ್ಕೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ ಭೇಟಿ

ನವೀಕರಣ ಕಾಮಗಾರಿ ನಡೆಯುತ್ತಿರುವ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರಕ್ಕೆ ಶನಿವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು.

Vijaya Karnataka 19 Jan 2020, 5:00 am
ಕಾಸರಗೋಡು: ನವೀಕರಣ ಕಾಮಗಾರಿ ನಡೆಯುತ್ತಿರುವ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರಕ್ಕೆ ಶನಿವಾರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿದರು.
Vijaya Karnataka Web veerendra heggade visit madhuru temple
ಮಧೂರು ಕ್ಷೇತ್ರಕ್ಕೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗೆಡೆ ಭೇಟಿ


ಈ ಸಂದರ್ಭ ಕ್ಷೇತ್ರದ ನವೀಕರಣ ಸಮಿತಿಯ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿಗಳು, ಭಕ್ತರು ಬರಮಾಡಿಕೊಂಡರು.

ಶ್ರೀ ಕ್ಷೇತ್ರದಲ್ಲಿನಡೆಯುತ್ತಿರುವ ನವೀಕರಣ ಕಾಮಗಾರಿಗಳನ್ನು ವೀಕ್ಷಿಸಿ, ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೇ ಕ್ಷೇತ್ರದ ವತಿಯಿಂದ ಸಹಾಯಧನ ನೀಡುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿಮಧೂರು ಕ್ಷೇತ್ರ ನವೀಕರಣ ಸಮಿತಿಯ ಅಧ್ಯಕ್ಷ ಯು.ಟಿ.ಆಳ್ವ, ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ, ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ, ಡಾ.ಬಿ.ಎಸ್‌.ರಾವ್‌, ಮಧೂರು ಕ್ಷೇತ್ರ ಕಾರ್ಯನಿರ್ವಾಹಣಾಧಿಕಾರಿ ಬಾಬು ಎಂ., ರವೀಶ ತಂತ್ರಿ ಕುಂಟಾರು, ಮುರಳೀ ಗಟ್ಟಿ, ಎಂ.ಆರ್‌.ಯೋಗೀಶ್‌, ಅಪ್ಪಯ್ಯ ನಾಯ್‌್ಕ, ರಾಮಪ್ಪ ಮಂಜೇಶ್ವರ, ಮಂಜುನಾಥ ಕಾಮತ್‌, ವಸಂತ ಕುಮಾರ್‌ ಕಾಮಾಡ, ಪ್ರಭಾಶಂಕರ, ಅಡ್ವಾ. ಅನಂತರಾಮ, ವಸಂತ ಅಜಕೋಡು ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ