ಆ್ಯಪ್ನಗರ

ಕೊಂಡೆವೂರು ಯಾಗಭೂಮಿಗೆ ಶ್ವೇತ ಅಶ್ವ ಆಗಮನ

ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರವರೆಗೆ ನಡೆಯಲಿರುವ ವಿಶ್ವಜಿತ್‌ ಅತಿರಾತ್ರ ಸೋಮಯಾಗದ ಸಿದ್ಧತಾ ಕಾರ್ಯಗಳು ಭರದಿಂದ ನಡೆಯುತ್ತಿದ್ದು

Vijaya Karnataka 12 Feb 2019, 5:00 am
ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18ರಿಂದ 24ರವರೆಗೆ ನಡೆಯಲಿರುವ ವಿಶ್ವಜಿತ್‌ ಅತಿರಾತ್ರ ಸೋಮಯಾಗದ ಸಿದ್ಧತಾ ಕಾರ್ಯಗಳು ಭರದಿಂದ ನಡೆಯುತ್ತಿದ್ದು, ಭಾನುವಾರ ಶ್ರೀ ವಿಷ್ಣು ಸಹಸ್ರನಾಮ ಅಭಿಯಾನ ರಥವು ಯಾಗ ಭೂಮಿಗೆ ಯಾಗಾಶ್ವದ ಜತೆ ಆಗಮಿಸಿ ಸಮಾಪ್ತಿಗೊಂಡಿತು. ಉಪ್ಪಳ ಪೇಟೆಯಿಂದ ಕೊಂಬು ಕಹಳೆ, ಚೆಂಡೆ, ಜಾಗಟೆ ವಾದನಗಳೊಂದಿಗೆ ಮಾತೆಯರ ಪೂರ್ಣಕುಂಭ ಹಾಗೂ ಮುತ್ತುಕೊಡೆ ಮತ್ತು ಕೊಂಡೆವೂರಿನ ಸದ್ಗುರು ಶ್ರೀ ನಿತ್ಯಾನಂದ ವಿದ್ಯಾ ಪೀಠದ ವಿದ್ಯಾರ್ಥಿಗಳಿಂದ ಕೋಲಾಟ, ಯೋಗಾಚಾಪ್‌, ಕುಣಿತ ಭಜನೆಗಳೊಂದಿಗೆ ಆರಂಭಗೊಂಡ ಶೋಭಾಯಾತ್ರೆಯು ಕೊಂಡೆವೂರು ಆಶ್ರಮ ಪರಿಸರದಲ್ಲಿ ಸಮಾಪ್ತಿಗೊಂಡಿತು.
Vijaya Karnataka Web white horse enters kondevooru yaga bhoomi
ಕೊಂಡೆವೂರು ಯಾಗಭೂಮಿಗೆ ಶ್ವೇತ ಅಶ್ವ ಆಗಮನ


ಭವ್ಯ ಶೋಭಾಯಾತ್ರೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಚಾಲನೆ ನೀಡಿದರು. ಆಶ್ರಮದಲ್ಲಿ ವೇದಮೂರ್ತಿ ಹರಿನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹವನ, ಸಾಮೂಹಿಕ ಪಾರಾಯಣ ಮತ್ತು ಲಕ್ಷ್ಮೀ ಪೂಜೆ ನಡೆಯಿತು. ಈ ಸಂದರ್ಭ ಭಕ್ತದಿಗಳು ಯಾಗ ಸೇವಾ ನಿಧಿಯನ್ನು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ