ಆ್ಯಪ್ನಗರ

ಜ್ಞಾನಾರ್ಜನೆಗೆ ಅಧ್ಯಯನ ಶೀಲರಾಗಿ

ವಿದ್ಯಾರ್ಥಿಗಳು ಉತ್ತಮ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಪ್ರೊ ಕೆಎನ್‌ಶಿವಕುಮಾರ್‌ ಹೇಳಿದರು ಇಲ್ಲಿನ ಬಿಟಿ...

Vijaya Karnataka Web 9 Aug 2016, 9:00 am

ಸೋಮವಾರಪೇಟೆ: ವಿದ್ಯಾರ್ಥಿಗಳು ಉತ್ತಮ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಕೆ.ಎನ್‌.ಶಿವಕುಮಾರ್‌ ಹೇಳಿದರು.

ಇಲ್ಲಿನ ಬಿ.ಟಿ.ಚನ್ನಯ್ಯ ಗೌರಮ್ಮ ಸರಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಅಭಿವಿನ್ಯಾಸ ಹಾಗೂ ಪ್ರಾಂಶುಪಾಲರ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಸರಕಾರಿ ಸೇವೆಯಲ್ಲಿದ್ದಾಗ ಜವಾಬ್ದಾರಿ ಹೆಚ್ಚು ಇರುತ್ತದೆ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದ ತೃಪ್ತಿಯೊಂದಿಗೆ, ಕಾಲೇಜಿನ ಅಭಿವೃದ್ಧಿಗೆ ತನ್ನ ಪ್ರಾಮಾಣಿಕ ಸೇವೆ ಸಲ್ಲಿಸಿದ ಆತ್ಮತೃಪ್ತಿ ಇದೆ ಎಂದು ಹೇಳಿದರು.

ಕಾಲೇಜಿನ ಅಭಿವೃದ್ಧಿಗೆ ಉಪಾನ್ಯಾಸಕರು, ಆಡಳಿತ ಮಂಡಳಿಯವರು ಹಾಗೂ ಪೋಷಕರು ಹೆಚ್ಚಿನ ಸಹಕಾರ ನೀಡಿದ್ದಾರೆ. ಎಲ್ಲರೂ ಸಮನ್ವಯತೆಯಿಂದ ಒಟ್ಟಾಗಿ ಕೆಲಸ ಮಾಡಿದರೆ ಮಾತ್ರ, ಯಾವುದೇ ಸಂಸ್ಥೆಯ ಬೆಳವಣಿಗೆ ಸಾಧ್ಯ ಎಂದರು.

ಪ್ರಾಂಶುಪಾಲ .ಕೆ.ಇ.ಐಪು, ಸಹಾಯಕ ಪ್ರಾಧ್ಯಾಪಕರುಗಳಾದ ಶ್ರೀಧರ್‌, ಕರಿಯಪ್ಪ ರೈ, ಎಚ್‌.ಎನ್‌. ರಮೇಶ್‌, ಉಪನ್ಯಾಸಕ ಮನೋಜ್‌ ಮಾತನಾಡಿದರು.

ಎಂಡಿಕೆ8ಎಸ್‌ಪಿಟಿ01-ಸೋಮವಾರಪೇಟೆ ಸಮೀಪದ ಬಿಟಿಸಿಜಿ ಸರಕಾರಿ ಪದವಿ ಕಾಲೇಜಿನಲ್ಲಿ ನಡೆದ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ.ಎನ್‌.ಶಿವಕುಮಾರ್‌ ಮಾತನಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ