ಆ್ಯಪ್ನಗರ

ಸರಕಾರಿ ಶಾಲೆಗಳಲ್ಲಿ ಓದುವುದು ಹೆಮ್ಮೆಯ ವಿಚಾರ

ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಓದಿಸುವುದರಿಂದ ಘನತೆಗೆ ದಕ್ಕೆ ಉಂಟಾಗುವುದಿಲ್ಲ ಅದು ಹೆಮ್ಮೆಯ ವಿಚಾರ ಎಂದು ಶಾಸಕ ಕೆಜಿ ಬೋಪಯ್ಯ ಹೇಳಿದರು...

ವಿಕ ಸುದ್ದಿಲೋಕ 1 Jun 2017, 8:45 pm

ಗೋಣಿಕೊಪ್ಪಲು: ಮಕ್ಕಳನ್ನು ಸರಕಾರಿ ಶಾಲೆಗಳಲ್ಲಿ ಓದಿಸುವುದರಿಂದ ಘನತೆಗೆ ದಕ್ಕೆ ಉಂಟಾಗುವುದಿಲ್ಲ. ಅದು ಹೆಮ್ಮೆಯ ವಿಚಾರ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ಪೊನ್ನಂಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ 2017-18ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಪೋ›ತ್ಸಾಹದಾಯಕ ಯೋಜನೆಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ವರ್ಷ ಹೆಚ್ಚು ಫಲಿತಾಂಶ ತಂದು ಕೊಡುವ ಗುರಿ ವಿದ್ಯಾರ್ಥಿಗಳದಾಗಬೇಕು ಎಂದು ಸಲಹೆ ನೀಡಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕು ಉತ್ತಮ ಫಲಿತಾಂಶವನ್ನು ಕಂಡಿದೆ. ಇದರ ಹಿಂದೆ ಶಿಕ್ಷಕರ ಪರಿಶ್ರಮವು ಹೆಚ್ಚಿದೆ. ಸರಕಾರಿ ಶಾಲೆಯ ಶಿಕ್ಷಕರ ಮೇಲೆ ಪೋಷಕರು ಹೆಚ್ಚಿನ ನಂಬಿಕೆ ಇಟ್ಟು ಮಕ್ಕಳನ್ನು ಶಾಲೆಗೆ ದಾಖಲಿಸಬೇಕು. ಖಾಸಗಿ ಶಾಲೆಗಳಿಗೆ ಸರಿಸಮವಾಗಿ ಸರಕಾರಿ ಶಾಲೆಗಳು ಸಹ ಕಾರ್ಯನಿರ್ವಹಿಸುತ್ತಿದೆ ಎಂಬುದು ಹೆಮ್ಮೆಯ ವಿಚಾರ ಎಂದರು.

ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕ ಯೋಜನೆಗಳಾದ ಸೈಕಲ್‌, ಶೂ, ಸಾಕ್ಸ್‌, ಪಠ್ಯಪುಸ್ತಕ, ಸಮವಸ್ತ್ರಗಳನ್ನು ಶಾಸಕ ವಿತರಿಸಿದರು.

ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಕ್ಷಕರು ಓದುವ ಹವ್ಯಾಸವನ್ನು ಬಿತ್ತಬೇಕು. ಶಿಕ್ಷಕರ ಸೇವಾ ಮನೋಭಾವದಿಂದ ವಿದ್ಯಾರ್ಥಿಗಳ ಭವಿಷ್ಯ ಪ್ರಜ್ವಲಿಸುತ್ತದೆ. ನಿಸ್ವಾರ್ಥ ಸೇವೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾಗಿದೆ ಎಂದು ಹೇಳಿದರು.

ಜಿ.ಪಂ. ಸದಸ್ಯೆ ಶ್ರೀಜಾ ಸಾಜಿ ಮಾತನಾಡಿ, ಶಾಲೆಯ ದಿನಗಳಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ವಿದ್ಯಾರ್ಥಿಗಳು ಸಮಾಜಕ್ಕೆ ಆದರ್ಶವಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.

ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್‌ ಮಾತನಾಡಿ, ಅಂದಿನ ಪಾಠವನ್ನು ಅಂದೆ ಅಧ್ಯಯನ ಮಾಡುವ ಮೂಲಕ ಉತ್ತಮ ಫಲಿತಾಂಶವನ್ನು ಪಡೆಯಿರಿ. ಪೋಷಕರೊಂದಿಗೆ ಹಾಗೂ ಶಿಕ್ಷಕರೊಂದಿಗೆ ಭಕ್ತಿ ಹಾಗೂ ಗೌರವಪೂರ್ವಕ ಭಾವನೆಯನ್ನು ಹೊಂದಿ ಉತ್ತಮ ವಿದ್ಯಾರ್ಥಿಗಳೆಂಬ ಹೆಗ್ಗಳಿಕೆಗೆ ಪಾತ್ರರಾಗಿ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಮಾತನಾಡಿ, ಸರಕಾರದ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಬಡತನ ರೇಖೆ ಕೆಳಗಿರುವವರಿಗೆ ಇದರ ಸದುಪಯೋಗವಾಗಿದೆ. ಸರಕಾರ ವಿವಿಧ ಸವಲತ್ತುಗಳನ್ನು ನಿಡುವ ಮೂಲಕ ಬಡ ವಿದ್ಯಾರ್ಥಿಗಳ ಓದಿಗೆ ಅನುಕೂಲ ಮಾಡಿಕೊಡುತ್ತಿದೆ. ಮುಂದಿನ ದಿನಗಳಲ್ಲಿ ಮೊಟ್ಟೆಯನ್ನು ಸಹ ಸರಕಾರ ನೀಡುವ ಭರವಸೆ ಇದೆ. ಇದಲ್ಲೆದರ ಸೌಲಭ್ಯ ಪಡೆಯಲು ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಎಂದು ಹೇಳಿದರು.

ತಾ.ಪ. ಅಧ್ಯಕ್ಷೆ ಸ್ಮಿತಾ ಪ್ರಕಾಶ್‌ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ. ಸದಸ್ಯೆ ಲೀಲಾವತಿ, ತಾ.ಪಂ. ಸದಸ್ಯೆ ಆಶಾ ಪೂಣಚ್ಚ, ಆಶಾ ಜೇಮ್ಸ್‌, ಗ್ರಾ.ಪಂ

Vijaya Karnataka Web
ಸರಕಾರಿ ಶಾಲೆಗಳಲ್ಲಿ ಓದುವುದು ಹೆಮ್ಮೆಯ ವಿಚಾರ

ಅಧ್ಯಕ್ಷೆ ಸುಮಿತಾ, ಕ್ಲಸ್ಟರ್‌ ಅಧಿಕಾರಿ ತಿರುನೆಲ್ಲಿಮಾಡ ಜೀವನ್‌, ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂಗಪ್ಪ ಉಪಸ್ಥಿತರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ