ಆ್ಯಪ್ನಗರ

ಕಾವೇರಿ ತಾಲೂಕು: ಶಾಮಿಯಾನ ಮಾಲೀಕರ ಸಂಘ ಧರಣಿ

ಕುಶಾಲನಗರವನ್ನು ಕೇಂದ್ರವಾಗಿಸಿಕೊಂಡು ನೂತನ ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಸರಣಿ ಧರಣಿಯಲ್ಲಿ ಕಾವೇರಿ ಶಾಮಿಯಾನ ಮಾಲೀಕರ ಸಂಘದ ...

Vijaya Karnataka Web 10 Dec 2017, 5:00 am

ಕುಶಾಲನಗರ: ಕುಶಾಲನಗರವನ್ನು ಕೇಂದ್ರವಾಗಿಸಿಕೊಂಡು ನೂತನ ಕಾವೇರಿ ತಾಲೂಕು ರಚನೆಗೆ ಆಗ್ರಹಿಸಿ ನಡೆಯುತ್ತಿರುವ ಸರಣಿ ಧರಣಿಯಲ್ಲಿ ಕಾವೇರಿ ಶಾಮಿಯಾನ ಮಾಲೀಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪಟ್ಟಣದ ಕಾರು ನಿಲ್ದಾಣ ಆವರಣದ ಗುಂಡೂರಾವ್‌ ಸತ್ಯಾಗ್ರಹ ವೇದಿಕೆಯಲ್ಲಿ ಸಂಘದ ಅಧ್ಯಕ್ಷ ಮಣಿ ನೇತೃತ್ವದಲ್ಲಿ ಧರಣಿಯಲ್ಲಿ ಪಾಲ್ಗೊಂಡ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ತಾಲೂಕು ರಚನೆಗೆ ಆಗ್ರಹಿಸಿ ಘೋಷಣೆ ಕೂಗಿದರು.

ಸಂಘದ ಕಾರ್ಯದರ್ಶಿ ನಾಗರಾಜ್‌, ಗೌರವಾಧ್ಯಕ್ಷ ಕೃಷ್ಣಪ್ಪ, ಪದಾಧಿಕಾರಿಗಳಾದ ನಾಗೇಂದ್ರ, ಕುಮಾರ್‌, ಸಂತೋಷ್‌, ಕೃಷ್ಣ, ಜಗ್ಗ, ಮಧು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ