ಆ್ಯಪ್ನಗರ

ಎರಡೂ ಕ್ಷೇತ್ರದಲ್ಲಿ ಎಸ್‌ಡಿಪಿಐ ಕಣಕ್ಕೆ

ವಿಕ ಸುದ್ದಿಲೋಕ ಮಡಿಕೇರಿ ಕೊಡಗಿನ ಎರಡು ವಿಧಾನಸಭೆ ಕ್ಷೇತ್ರಗಳಲ್ಲೂ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಪಕ್ಷ ತನ್ನ ಅಭ್ಯರ್ಥಿಗಳನ್ನು ...

Vijaya Karnataka 19 Apr 2018, 5:00 am

ವಿಕ ಸುದ್ದಿಲೋಕ ಮಡಿಕೇರಿ

ಕೊಡಗಿನ ಎರಡು ವಿಧಾನಸಭೆ ಕ್ಷೇತ್ರಗಳಲ್ಲೂ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಳಿಸಲು ತೀರ್ಮಾನಿಸಿದೆ.

ಮಡಿಕೇರಿಯಲ್ಲಿರುವ ಪಕ್ಷ ದ ಜಿಲ್ಲಾ ಕಚೇರಿಯಲ್ಲಿ ಬುಧವಾರ ಚುನಾವಣಾ ವೀಕ್ಷ ಕ ಅಕ್ರಂ ಹಸ್ಸನ್‌ ಹಾಗೂ ಶಾಫಿ ಬೆಳ್ಳಾರೆ ನೇತೃತ್ವದಲ್ಲಿ ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರ ಬಗ್ಗೆ ಗಂಭೀರ ಚರ್ಚೆ ನಡೆಸಲಾಯಿತು.

ಮಡಿಕೇರಿ ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪಡೆಯಲಾಗಿದ್ದು, ವಿರಾಜಪೇಟೆ ಕ್ಷೇತ್ರದಲ್ಲಿ ಪಕ್ಷ ದ ಜಿಲ್ಲಾಧ್ಯಕ್ಷ ಹಾಗೂ ಮಡಿಕೇರಿ ನಗರಸಭೆ ಸದಸ್ಯ ಅಮೀನ್‌ ಮೊಹಿಸಿನ್‌ ಮತ್ತು ಪೀಟರ್‌ ಹೆಸರನ್ನು ಅದೇ ರೀತಿ ಮಡಿಕೇರಿ ಕ್ಷೇತ್ರದಲ್ಲಿ ವಕೀಲ ಟಿ.ಎಚ್‌ ಅಬೂಬಕ್ಕರ್‌, ರಾಜ್ಯ ಸಮಿತಿ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮತ್ತು ಮಾಜಿ ಜಿಲ್ಲಾಧ್ಯಕ್ಷ ಎಂ.ಎ ಫಜಲುಲ್ಲಾ ಅವರ ಹೆಸರುಗಳನ್ನು ಸೂಚಿಸಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಎ. 22ಕ್ಕೆ ಘೋಷಣೆ ಮಾಡಲಿದ್ದು, ಎ. 23ಕ್ಕೆ ನಾಮಪತ್ರ ಸಲ್ಲಿಸಲಾಗುವುದು ಎಂದು ಸಭೆ ನಿರ್ಣಯ ಕೈಗೊಂಡಿದೆ.

ಜಿಲ್ಲಾಧ್ಯಕ್ಷ ಅಮೀನ್‌ ಮೊಹಿಸಿನ್‌, ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಅಡ್ಕಾರ್‌, ಸದಸ್ಯರಾದ ಪೀಟರ್‌, ಮನ್ಸೂರ್‌, ನಾಗರತ್ನ, ಶೌಕತ್‌ ಅಲಿ, ಇಬ್ರಾಹಿಂ, ಹ್ಯಾರಿಸ್‌ ಹಾಜರಿದ್ದರು.

ಫೋಟೋ:ಎಂಡಿಕೆ18ಜೆಎವೈ15: ಎಸ್‌ಡಿಪಿಐ ಪಕ್ಷ ದ ಜಿಲ್ಲಾ ಕಚೇರಿಯಲ್ಲಿ ಚುನಾವಣಾ ವೀಕ್ಷ ಕ ಅಕ್ರಂ ಹಸ್ಸನ್‌ ಹಾಗೂ ಶಾಫಿ ಬೆಳ್ಳಾರೆ ನೇತೃತ್ವದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ