ಆ್ಯಪ್ನಗರ

ಹೋಂಸ್ಟೇ ಮೇಲೆ ಮರ ಬಿದ್ದು ಲಕ್ಷಾಂತರ ರೂ. ನಷ್ಟ

ವಿಕ ಸುದ್ದಿಲೋಕ ಸುಂಟಿಕೊಪ್ಪ ಕೆದ್‌ಕಲ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಕಾಳಿ ದೇವಸ್ಥಾನದ ಸಮೀಪದ ಹೋಂಸ್ಟೇ ಮೇಲೆ ಭಾರಿ ಮರವೊಂದು ಬಿದ್ದು ಲಕ್ಷಾಂತರ ರೂ ನಷ್ಟವಾಗಿದೆ...

Vijaya Karnataka 11 Jun 2018, 5:00 am
ಸುಂಟಿಕೊಪ್ಪ: ಕೆದ್‌ಕಲ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಕಾಳಿ ದೇವಸ್ಥಾನದ ಸಮೀಪದ ಹೋಂಸ್ಟೇ ಮೇಲೆ ಭಾರಿ ಮರವೊಂದು ಬಿದ್ದು ಲಕ್ಷಾಂತರ ರೂ. ನಷ್ಟವಾಗಿದೆ.
Vijaya Karnataka Web
ಹೋಂಸ್ಟೇ ಮೇಲೆ ಮರ ಬಿದ್ದು ಲಕ್ಷಾಂತರ ರೂ. ನಷ್ಟ


ಪ್ರಮೋದ್‌ ಎಂಬವವರಿಗೆ ಸೇರಿದ ಜಮ್ಮಬಾಣೆ ಹೋಮ್‌ಸ್ಟೇ ಮೇಲೆ ಮರ ಬಿದ್ದ ಸಮಯದಲ್ಲಿ ಯಾರೂ ಇಲ್ಲದೇ ಇದ್ದುದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಸುಂಟಿಕೊಪ್ಪ ವ್ಯಾಪ್ತಿಯಲ್ಲಿ 2 ದಿನದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ವಿದ್ಯುತ್‌ ಬಾರದ ಕಾರಣ ಗ್ರಾಮೀಣ ಪ್ರದೇಶ ಬಹುತೇಕ ಕತ್ತಲಿನಿಂದ ಕೂಡಿದೆ. ಅಲ್ಲಲ್ಲಿ ಮರ ಬಿದ್ದ ಕಾರಣ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಮಳೆ ಬಿರುಸು ಗೊಂಡ ಕಾರಣ ಕೃಷಿಕರು ಗದ್ದೆ ಕೆಲಸದಲ್ಲಿ ತೊಡಗಿದ್ದು, ಭತ್ತಕ್ಕೆ ಉತ್ತಮ ಮಳೆಯಾಗುತ್ತಿದ್ದು, ಕಾಫಿ, ಕಾಳು ಮೆಣಸಿಗೆ ಮಳೆ ಹೆಚ್ಚಾದ ಕಾರಣ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ. ಧಾರಾಕಾರ ಮಳೆ ಸುರಿದ ಕಾರಣ ಭಾನುವಾರ ಸಂತೆ ದಿನ ಜನ ಬಾರದೆ ವ್ಯಾಪಾರಿಗಳು ವ್ಯಾಪಾರವಿಲ್ಲದೆ ಚಿಂತೆಯಲ್ಲಿ ಕಾಲ ಕಳೆಯುವಂತಾಯಿತು. ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹರದೂರು ನಾಕೂರು ಅಂದಗೋವೆ ಎಮ್ಮೆಗುಂಡಿ ಕಾನ್‌ಬೈಲು ಭಾಗದಲ್ಲಿ 3 ಇಂಚು ಮೇಲ್ಪಟ್ಟು ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ