ಆ್ಯಪ್ನಗರ

ಮುಂದುವರಿದ ಮಳೆ: ಕತ್ತಲೆಯಲ್ಲಿ ಗ್ರಾಮ

ಕೊಡ್ಲಿಪೇಟೆ, ಶನಿವಾರಸಂತೆ, ಆಲೂರುಸಿದ್ದಾಪುರ, ಹಂಡ್ಲಿ ಸೇರಿದಂತೆ ಸುತ್ತಮುತ್ತ ಮತ್ತೆ ಭಾರಿ ಮಳೆ ಗಾಳಿ ಮುಂದುವರಿದಿದೆ. ಕೆಲವೆಡೆ ರಸ್ತೆಗೆ ಅಡ್ಡಲಾಗಿ ಮರ ಹಾಗೂ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ ಇದರಿಂದ ಅನೇಕ ಗ್ರಾಮಗಳು ಕತ್ತಲೆಯಲ್ಲಿ ದಿನತಳ್ಳುತ್ತಿವೆ.

Vijaya Karnataka 13 Jul 2018, 5:00 am
ಶನಿವಾರಸಂತೆ: ಕೊಡ್ಲಿಪೇಟೆ, ಶನಿವಾರಸಂತೆ, ಆಲೂರುಸಿದ್ದಾಪುರ, ಹಂಡ್ಲಿ ಸೇರಿದಂತೆ ಸುತ್ತಮುತ್ತ ಮತ್ತೆ ಭಾರಿ ಮಳೆ ಗಾಳಿ ಮುಂದುವರಿದಿದೆ. ಕೆಲವೆಡೆ ರಸ್ತೆಗೆ ಅಡ್ಡಲಾಗಿ ಮರ ಹಾಗೂ ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ ಇದರಿಂದ ಅನೇಕ ಗ್ರಾಮಗಳು ಕತ್ತಲೆಯಲ್ಲಿ ದಿನತಳ್ಳುತ್ತಿವೆ.
Vijaya Karnataka Web
ಮುಂದುವರಿದ ಮಳೆ: ಕತ್ತಲೆಯಲ್ಲಿ ಗ್ರಾಮ


ದುಂಡಳ್ಳಿ ಗ್ರಾಮ ಪಂಚಾಯಿತಿ ಒಳಪಡುವ ಅಪ್ಪಶೆಟ್ಟಳಿಯ ಕೂಲಿ ಕಾರ್ಮಿಕ ಕಮಲಮ್ಮ ಎಂಬುವವರ ಮನೆಯ ಮೇಲೆ ಭಾರಿ ಮರವೊಂದು ಬಿದ್ದಿದ್ದು , ಮನೆ ಸಂಪೂರ್ಣ ಜಖಂಗೊಂಡಿದೆ

ಆಲೂರು ಗ್ರಾಮಪಂಚಾಯಿತಿಗೆ ಒಳಪಡುವ ಕಣಿವೆ ಬಸವನಹಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಒಳ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ರಸ್ತೆಯೆಲ್ಲ ಕೆರೆಗಳಾಂತಾಗಿವೆ.

ಶನಿವಾರಸಂತೆ- ಕುಶಾಲನಗರ ಮುಖ್ಯ ರಸ್ತೆಯ ಆಲೂರುಸಿದ್ದಾಪುರ ಸೇರಿದಂತೆ ಅಲ್ಲಲ್ಲಿ ರಸ್ತೆಯ ಒಳ ಚರಂಡಿಗಳು ಮುಚ್ಚಿರುವುದರಿಂದ ಮುಖ್ಯ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿದೆ. ಇದರಿಂದ ಗುಂಡಿ ಇರುವ ರಸ್ತೆಗಳು ಕೆರೆಯಂತಾಗಿದೆ. ಶನಿವಾರಸಂತೆ ಗ್ರಾಮ ಪಂಚಾಯಿತಿ ಕೆಲವೆಡೆ ಒಳಚರಂಡಿ ಸರಿ ಇಲ್ಲದೆ ನೀರೆಲ್ಲ ರಸ್ತೆಯಲ್ಲೆ ಹರಿದರೆ, ಹಂಡ್ಲಿ ಗ್ರಾಮ ಪಂಚಾಯಿತಿಯ ಗುಡುಗಳಲೆ ಸೇತುವೆ ಮೇಲೆ ಮಳೆ ನೀರು ಸಂಗ್ರಹವಾಗುತ್ತಿದೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಭಾರಿ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಕೆಲ ಕಾಫಿ ತೋಟಗಳಲ್ಲಿ ಕಾರ್ಮಿಕರು ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ