ಆ್ಯಪ್ನಗರ

ತಾತ್ಕಾಲಿಕವಾಗಿ ಗೋಶಾಲೆ ಆರಂಭ

ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಜಾನುವಾರುಗಳ ಪ್ರಾಣ ರಕ್ಷ ಣೆಗೆ ಸಂಬಂದಿಸಿದಂತೆ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಮೂರು ...

Vijaya Karnataka 11 Aug 2019, 9:30 pm
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಜಾನುವಾರುಗಳ ಪ್ರಾಣ ರಕ್ಷ ಣೆಗೆ ಸಂಬಂದಿಸಿದಂತೆ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಮೂರು ತಾಲೂಕುಗಳಲ್ಲಿ ತಾತ್ಕಾಲಿಕವಾಗಿ ಗೋಶಾಲೆ ತೆರೆಯಲಾಗಿದೆ.
Vijaya Karnataka Web
ತಾತ್ಕಾಲಿಕವಾಗಿ ಗೋಶಾಲೆ ಆರಂಭ


ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ಹಾಗೂ ಪ್ರ್ರಕೃತಿಕ ವಿಕೋಪದಲ್ಲಿ ಸಿಲುಕಿರುವ ಜಾನುವಾರುಗಳಿಗೆ ಗೋಶಾಲೆಯಲ್ಲಿ ಉಚಿತವಾಗಿ ಮೇವು-ಆಹಾರ ಮತ್ತು ಚಿಕಿತ್ಸೆ ನೀಡಿ ಪೋಷಿಸಲಾಗುವುದು. ಪರಿಸ್ಥಿತಿ ಸುಧಾರಿಸಿದ ನಂತರ ಜಾನುವಾರುಗಳನ್ನು ಸಂಬಂಧಪಟ್ಟ ಮಾಲೀಕರಿಗೆ ಹಿಂತಿರುಗಿಸಲಾಗುವುದು.

ಆದ್ದರಿಂದ ಸಾರ್ವಜನಿಕರು ತಮ್ಮ ಜಾನುವಾರುಗಳನ್ನು ಪೋಷಿಸಲು ಸಾದ್ಯವಾಗದಿದ್ದಲ್ಲಿ ಜಿಲ್ಲಾ ಮಟ್ಟದ ಸಹಾಯವಾಣಿ ಸಂಖ್ಯೆ 08272-229449, ಮಡಿಕೇರಿ ತಾಲೂಕು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರು 08272-228805, ವಿರಾಜಪೇಟೆ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರು -08274-257228, ಸೋಮವಾರಪೇಟೆ ಪಶು ಆಸ್ಪತ್ರೆ, ಸಹಾಯಕ ನಿರ್ದೇಶಕರು- 08276-282127 ಸಹಾಯವಾಣಿ¿åನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ