ಆ್ಯಪ್ನಗರ

ಕೊಡಗು: ಒಂದೇ ದಿನ 14 ಮಂದಿಗೆ ಕೊರೊನಾ, ಸೋಂಕಿನಿಂದ ಮತ್ತೊಂದು ಸಾವು

ಕೊಡಗು ಜಿಲ್ಲೆಯಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ಸೋಂಕಿನ ಕಾರಣಕ್ಕೆ ಮತ್ತೊಂದು ಸಾವು ಸಂಭವಿಸಿದೆ. ಇದುವರೆಗೂ ಒಂಭತ್ತು ಜನ ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 400ರ ಗಡಿಯತ್ತಿರ ಬಂದು ನಿಂತಿದೆ.

Vijaya Karnataka Web 30 Jul 2020, 8:00 pm
ಕೊಡಗು: ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಕಾರಣದಿಂದ ಮತ್ತೊಂದು ಸಾವು ಸಂಭವಿಸಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 09 ಕ್ಕೇರಿದೆ. ಜೊತೆಗೆ ಗುರುವಾರ ಮತ್ತೆ 14 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದ್ದು, ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.
Vijaya Karnataka Web 14 coronavirus positive and one death reported in kodagu
ಕೊಡಗು: ಒಂದೇ ದಿನ 14 ಮಂದಿಗೆ ಕೊರೊನಾ, ಸೋಂಕಿನಿಂದ ಮತ್ತೊಂದು ಸಾವು


14 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 400ರ ಗಡಿ ಬಳಿ ಬಂದು ನಿಂತಿದ್ದು, ಇದುವರೆಗೂ 399 ಜನರ ಕೊರೊನಾ ವರದಿ ಪಾಸಿಟಿವ್‌ ಬಂದಿದೆ. ವಿರಾಜಪೇಟೆ ತಾಲೂಕು ಪಾಲಿಬೆಟ್ಟ ಗ್ರಾಮದ ನಿವಾಸಿ ಮತ್ತು ಸಮುದಾಯ ಆರೋಗ್ಯ ಕೇಂದ್ರ, ಪಾಲಿಬೆಟ್ಟದಲ್ಲಿ ಆರೋಗ್ಯ ಕಾರ್ಯಕರ್ತರಾಗಿದ್ದ 45 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.

ಅವರು ಜು.19ಕ್ಕೆ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಜು.20ಕ್ಕೆ ಇವರ ಗಂಟಲು/ಮೂಗು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, ಜು.21ರಂದು ನೆಗೆಟಿವ್ ವರದಿ ಬಂದಿತ್ತು. ಆದ್ದರಿಂದ ಜುಲೈ 21ರಂದು ಅವರನ್ನು ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಕೊರೊನಾ ವೈರಸ್‌ ತಗುಲಿ ಕೊಡಗಿನಲ್ಲಿ ಮತ್ತೊಬ್ಬ ಮಹಿಳೆ ಸಾವು

ಜು.29 ರಂದು ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾದ್ದರಿಂದ ಪುನ: ಅವರ ಗಂಟಲು/ಮೂಗು ದ್ರವ ಮಾದರಿಯನ್ನು ತೆಗೆದು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು. ತಕ್ಷಣವೇ ಅವರನ್ನು ಐಸಿಯು ಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದು, ಗುರುವಾರ ಬಂದ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್‌ ಬಂದಿದೆ.

ಪ್ರವಾಸೋದ್ಯಮ ಲಾಕ್‌ ಓಪನ್‌ ಮಾಡಿ: ಕೊಡಗು ಜಿಲ್ಲಾಧಿಕಾರಿಗೆ ಸಚಿವ ಸೋಮಣ್ಣ ಸಲಹೆ

ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 399ಕ್ಕೆ ಏರಿಕೆಯಾಗಿದೆ. ಇದರಲ್ಲಿ 289 ಜನ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 9 ಜನ ಸಾವನ್ನಪ್ಪಿದ್ದು, 101 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೂ 99 ಕಂಟೈನ್ಮೆಂಟ್‌ ಝೋನ್‌ಗಳನ್ನು ಗುರುತಿಸಲಾಗಿದೆ.

ಕೊಡಗಿನಲ್ಲಿ ಭತ್ತ ನಾಟಿಗೆ ಬಂತು ಪ್ಯಾಡಿ ಡ್ರಮ್‌ ಸೀಡರ್‌: ಕೊರೊನಾ ಕಾಲದಲ್ಲಿ ಕಾರ್ಮಿಕರ ಕೊರತೆ ನೀಗಿಸಿದ ಯಂತ್ರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ