21ರಂದು ಜಿಲ್ಲಾ ಮಟ್ಟದ ಯುವಜನ ಮೇಳ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಮೂರು ತಾಲೂಕುಗಳ ಯುವ ಒಕ್ಕೂಟ ಹಾಗೂ ನೇಗಳ್ಳೆ ಯುವಕ ಸಂಘದ ಆಶ್ರಯದಲ್ಲಿ ಜ.21 ರಂದು 2017-18ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಯುವಜನಮೇಳ ಸೋಮವಾರಪೇಟೆ ತಾಲೂಕಿನ ನೇರುಗಳೆ ಪಂಚಾಯಿತಿ ವ್ಯಾಪ್ತಿಯ ನೇಗಳ್ಳೆ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಉಪಾಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಮೂರು ತಾಲೂಕುಗಳ ಯುವ ಒಕ್ಕೂಟ ಹಾಗೂ ನೇಗಳ್ಳೆ ಯುವಕ ಸಂಘದ ಆಶ್ರಯದಲ್ಲಿ ಜ.21 ರಂದು 2017-18ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಯುವಜನಮೇಳ ಸೋಮವಾರಪೇಟೆ ತಾಲೂಕಿನ ನೇರುಗಳೆ ಪಂಚಾಯಿತಿ ವ್ಯಾಪ್ತಿಯ ನೇಗಳ್ಳೆ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಉಪಾಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಯುವಜನ ಮೇಳದಲ್ಲಿ ಯುವಕ-ಯುವತಿಯರಿಗೆ ಭಾವಗೀತೆ, ಲಾವಣಿ, ರಂಗಗೀತೆ, ಏಕಪಾತ್ರ ಅಭಿನಯ ಗೀಗೀ ಪದ, ಸೋಬಾನೆ ಪದ, ಭಜನೆ, ಜೋಳ, ರಾಗಿ ಬೀಸುವ ಪದ, ಜಾನಪದ ನೃತ್ಯ ಹಾಗೂ ಕೋಲಾಟ ಸ್ಪರ್ಧೆ ಆಯೋಜಿಸಲಾಗಿದ್ದು, ಭಾಗವಹಿಸುವ ಸ್ಪರ್ಧಾ ತಂಡಗಳಿಗೆ ಪ್ರಯಾಣ ಭತ್ಯೆ ಹಾಗೂ ಪ್ರಥಮ-ದ್ವಿತೀಯ ತಂಡಗಳಿಗೆ ಪ್ರಮಾಣಪತ್ರ ಮತ್ತು ಪಾರಿತೋಷಕ ನೀಡಲಾಗುವುದು. ತಾಲೂಕು ಮಟ್ಟದ ಯುವಜನ ಮೇಳವನ್ನು ಸರಕಾರ ರದ್ದುಗೊಳಿಸಿರುದರಿಂದ ಸ್ಪರ್ಧಾಳುಗಳು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಬಹುದು'', ಎಂದು ಮಾಹಿತಿ ನೀಡಿದರು.
'' ಮಡಿಕೇರಿ ಶಾಸಕರ ಅಧ್ಯಕ್ಷ ತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಪ್ರಮೋದ್ ಮಧ್ವರಾಜ್, ಮೈಸೂರು ಹಾಗೂ ಕೊಡಗು ಜಿಲ್ಲಾ ಸಂಸದರು, ಎಂಎಲ್ಸಿ ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ ಭಾಗವಹಿಸಲಿದ್ದಾರೆ.
ಸಂಜೆ 5.30ಕ್ಕೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ ಅಧ್ಯಕ್ಷ ತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ನೇರುಗಳೆ ಗ್ರಾ.ಪಂ.ಚಾಯಿತಿ ಅಧ್ಯಕ್ಷ ಎ.ಎಚ್.ತಿಮ್ಮಯ್ಯ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಪಾಲ್ಗೊಳ್ಳಲಿದ್ದಾರೆ,'' ಎಂದು ತಿಳಿಸಿದರು.
''ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಸ್ಪರ್ಧಾಳುಗಳು ಫೆ.20, 21, 22ರಂದು ಪುತ್ತೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಯುವಜನ ಮೇಳದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್, ಮೊ-9481213920, ಎನ್.ಎಂ.ದಿವಾಕರ್, ಮೊ-9481772110, ನವೀನ್ ದೇರಳ, ಮೊ-9449952008 ಸಂಪರ್ಕಿಸಬಹುದು,'' ಎಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ನೇಗಳ್ಳೆಯ ವೀರಭದ್ರೇಶ್ವರ ಯುವಕ ಸಂಘದ ಅಧ್ಯಕ್ಷ ಎನ್.ಎಂ.ದಿವಾಕರ್, ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಎಂ.ಡಿ.ಹರೀಶ್, ಸೋಮವಾರಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ಶೋಭರಾಜ್, ಪ್ರಮುಖರಾದ ಇಂದುಮತಿ ಹಾಜರಿದ್ದರು.