ಆ್ಯಪ್ನಗರ

ಪ್ರಚೋದನಕಾರಿ ಪೋಸ್ಟರ್‌, ದೂರು

ಅಯೋಧ್ಯೆ ಪ್ರಕರಣದ ತೀರ್ಪು ಕುರಿತು ಪ್ರಚೋದನಕಾರಿ ಪೋಸ್ಟರ್‌ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯೊಂದರ ವಿರುದ್ಧ ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka 21 Nov 2019, 5:00 am
Vijaya Karnataka Web a provocative poster complaint
ಪ್ರಚೋದನಕಾರಿ ಪೋಸ್ಟರ್‌, ದೂರು
ಸುಂಟಿಕೊಪ್ಪ: ಅಯೋಧ್ಯೆ ಪ್ರಕರಣದ ತೀರ್ಪು ಕುರಿತು ಪ್ರಚೋದನಕಾರಿ ಪೋಸ್ಟರ್‌ ಅಂಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯೊಂದರ ವಿರುದ್ಧ ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿನ ಗ್ರಾಮ ಪಂಚಾಯಿತಿಯ ಗೋಡೆ, ಬಸ್ಸು ತಂಗುದಾಣದ ಗೋಡೆಯ ಮೇಲೆ ಪೋಸ್ಟರ್‌ಗಳನ್ನು ಅಂಟಿಸಿದ್ದು, ''ಗ್ರಾಮ ಪಂಚಾಯಿತಿಯ ಅನುಮತಿ ಪಡೆಯದೇ ಮತೀಯ ಸಾಮರಸ್ಯ ಕದಡುವ ಉದ್ದೇಶದಿಂದ ಸಾರ್ವಜನಿಕ ಸ್ಥಳದಲ್ಲಿ ಕರಪತ್ರ ಅಂಟಿಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳಿ,'' ಎಂದು ಗ್ರಾಮ ಪಂಚಾಯಿತಿ ಮೂಲಕ ಲಿಖಿತ ದೂರು ನೀಡಲಾಗಿದೆ. ಠಾಣಾಧಿಕಾರಿ ತಿಮ್ಮಪ್ಪ ದೂರು ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ