ಆ್ಯಪ್ನಗರ

ಸೂಕ್ಷ್ಮ ಪರಿಸರ ವಲಯಕ್ಕೆ ಮೂಲನಿವಾಸಿಗಳ ಸಂಘ ಆಕ್ಷೇಪ

ಕಸ್ತೂರಿ ರಂಗನ್‌ ವರದಿಯ ಶಿಫಾರಸ್ಸಿನಂತೆ ಕೊಡಗಿನ ಹಲವು ಗ್ರಾಮಗಳನ್ನು ಸೂಕ್ಷ್ಮ ಪರಿಸರ ವಲಯವೆಂದು ಘೋಷಿಸಿರುವುದು ಖಂಡನೀಯ ಎಂದು ಪುಷ್ಪಗಿರಿ ಮೂಲ ...

ವಿಕ ಸುದ್ದಿಲೋಕ 21 Mar 2017, 9:00 am

ಮಡಿಕೇರಿ: ಕಸ್ತೂರಿ ರಂಗನ್‌ ವರದಿಯ ಶಿಫಾರಸ್ಸಿನಂತೆ ಕೊಡಗಿನ ಹಲವು ಗ್ರಾಮಗಳನ್ನು ಸೂಕ್ಷ್ಮ ಪರಿಸರ ವಲಯವೆಂದು ಘೋಷಿಸಿರುವುದು ಖಂಡನೀಯ ಎಂದು ಪುಷ್ಪಗಿರಿ ಮೂಲ ನಿವಾಸಿಗಳ ಸಂಘ ಹೇಳಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎಸ್‌. ಚಂದ್ರಶೇಖರ್‌, ''ಕೊಡಗಿನವರು ಅನಾದಿ ಕಾಲದಿಂದಲೂ ಪ್ರಕೃತಿಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಪ್ರಕೃತಿ ರಕ್ಷಣೆ ಮಾಡುತ್ತಾ ಬಂದಿದ್ದಾರೆ. ಇವರಿಗೆ ಪ್ರಕೃತಿಯ ರಕ್ಷಣೆಯನ್ನು ಬೇರೆಯವರು ಹೇಳಿಕೊಡಬೇಕಾಗಿಲ್ಲ. ಆದರೆ ಇದೀಗ ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸಿ ಇಲ್ಲಿನ ಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಯುತ್ತಿದೆ'' ಎಂದು ಆಕ್ಷೇಪಿಸಿದರು.

''ಒಂದು ವೇಳೆ ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸಿದಲ್ಲಿ ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮೂಲಭೂತ ಹಕ್ಕುಗಳಿಂದ ವಂಚಿತರಾಗುತ್ತಾರೆ. ಇಲ್ಲಿ ಧಾರ್ಮಿಕ ಕಾರ್ಯಗಳನ್ನು ಕೂಡ ನಡೆಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್‌ ವರದಿಯಲ್ಲಿನ ಕೆಲವು ಅಂಶಗಳನ್ನು ತೆಗೆದುಕೊಂಡು ನಿವಾಸಿಗಳಿಗೆ ತೊಂದರೆಯಾಗುವ ಅಂಶಗಳನ್ನು ಕೈ ಬಿಡಬೇಕು'' ಎಂದು ಒತ್ತಾಯಿಸಿದರು.

''ಸೂಕ್ಷ್ಮ ಪರಿಸರ ವಲಯ ಎಂದು ಯಾವ ಆಧಾರದಲ್ಲಿ ಕೊಡಗಿನ ಕೆಲವು ಗ್ರಾಮಗಳನ್ನು ಗುರುತಿಸಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ. ಈ ಸಂದರ್ಭ ಜನ ಪ್ರತಿನಿಧಿಗಳು ಏನು ಮಾಡುತ್ತಿದ್ದರು ಎನ್ನುವುದು ಪ್ರಶ್ನೆ. ಜನರ ಹಿತ ಕಾಯಬೇಕಾದ ಜನ ಪ್ರತಿನಿಧಿಗಳ ಮೌನ ಅರ್ಥವಾಗುವುದಿಲ್ಲ. ಒಂದು ವೇಳೆ ಜನರಿಗೆ ಅನ್ಯಾಯವಾಗುತ್ತಿದ್ದಲ್ಲಿ ಅವರು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು'' ಎಂದು ಒತ್ತಾಯಿಸಿದರು.

ತಾವು ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನಿಗೆ ಮನವಿ ಸಲ್ಲಿಸಿರುವುದಾಗಿ ಹೇಳಿದರು.

ಗೋಷ್ಠಿಯಲ್ಲಿ ಎಂ.ಟಿ. ದಿನೇಶ್‌, ಎ.ಕೆ. ಚಂಗಪ್ಪ, ಜೆ.ಬಿ. ಬಿದ್ದಪ್ಪ, ಎಂ.ಎಸ್‌. ಲಕ್ಷ್ಮಿಕಾಂತ್‌ ಮುಂತಾದವರು ಉಪಸ್ಥಿತರಿದ್ದರು.

Vijaya Karnataka Web aboriginal association objected
ಸೂಕ್ಷ್ಮ ಪರಿಸರ ವಲಯಕ್ಕೆ ಮೂಲನಿವಾಸಿಗಳ ಸಂಘ ಆಕ್ಷೇಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ