ಆ್ಯಪ್ನಗರ

ಜಾಲತಾಣದಲ್ಲಿ ಆಕ್ಷೇಪಾರ್ಹ ಚಿತ್ರ: ಪ್ರತಿಭಟನೆ

ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಬಾಗಲಕೋಟೆಯ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಯೇಸುಕ್ರಿಸ್ತರ ಆಕ್ಷೇಪಾರ್ಹ ಚಿತ್ರಗಳನ್ನು ಅಪ್‌ಲೋಡ್‌ ಮಾಡುವ ಮೂಲಕ ಕ್ರೈಸ್ತರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದು, ಇದನ್ನು ಖಂಡಿಸಿ ರೋಮನ್‌ ಕ್ಯಾಥೋಲಿಕ್‌ ಅಸೋಸಿಯೇಷನ್‌ ವತಿಯಿಂದ ಮಡಿಕೇರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

Vijaya Karnataka 29 Dec 2018, 5:00 am
ಮಡಿಕೇರಿ: ಕ್ರಿಸ್‌ಮಸ್‌ ಹಬ್ಬದ ಸಂದರ್ಭದಲ್ಲಿ ಬಾಗಲಕೋಟೆಯ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಯೇಸುಕ್ರಿಸ್ತರ ಆಕ್ಷೇಪಾರ್ಹ ಚಿತ್ರಗಳನ್ನು ಅಪ್‌ಲೋಡ್‌ ಮಾಡುವ ಮೂಲಕ ಕ್ರೈಸ್ತರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದು, ಇದನ್ನು ಖಂಡಿಸಿ ರೋಮನ್‌ ಕ್ಯಾಥೋಲಿಕ್‌ ಅಸೋಸಿಯೇಷನ್‌ ವತಿಯಿಂದ ಮಡಿಕೇರಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
Vijaya Karnataka Web MDK-mdk28jay15


ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಆರೋಪಿಯನ್ನು ಬಂಧಿಸುವಂತೆ ಘೋಷಣೆಗಳನ್ನು ಕೂಗಿ ಆತನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಕೊಡಗು ವಲಯ ಶ್ರೇಷ್ಠ ಧರ್ಮ ಗುರುಗಳಾದ ಫಾದರ್‌ ಮೊದಲೈ ಮುತ್ತು, ''ಕ್ರಿಸ್‌ಮಸ್‌ ಸಂದರ್ಭದಲ್ಲಿ ವ್ಯಕ್ತಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಯೇಸು ಕ್ರಿಸ್ತ ಮತ್ತು ಕನ್ಯಾ ಸ್ತ್ರೀಯರ ಅರೆ ನಗ್ನ ಚಿತ್ರ ಹಾಗೂ ಕ್ರಿಸ್ತರ ಜನನದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿ ಕ್ರೈಸ್ತ ಜನಾಂಗವನ್ನು ಉದ್ರೇಕಗೊಳ್ಳುವಂತೆ ಮಾಡಿದ್ದಾನೆ. ಭಾರತದ ಸಂವಿಧಾನವನ್ನು ಗೌರವಿಸಿ ಜೀವನ ನಡೆಸುವ ಕ್ರೈಸ್ತ ಜನಾಂಗದಲ್ಲಿ ಅಶಾಂತಿಯನ್ನು ಉಂಟು ಮಾಡಿದ್ದಾನೆ. ನಾಗರಿಕ ಸಮಾಜದಲ್ಲಿ ಅಶಾಂತಿ ಕದಡಲು ಪ್ರೇರೇಪಿಸುವ ಈತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಹಾಗೂ ಶಾಂತಿ ಭಾವೈಕ್ಯತೆಯಿಂದ ಬದುಕುವ ಕ್ರೈಸ್ತ ಬಾಂಧವರಿಗೆ ಸೂಕ್ತ ರಕ್ಷ ಣೆ ನೀಡಬೇಕು,'' ಎಂದು ಮನವಿ ಮಾಡಿದರು.

''ಕ್ರೈಸ್ತರು ಶಾಂತಿ ಸಾರುವವರು. ಆದರೆ ಇದೀಗ ಶಾಂತಿ ಕದಡುವ ಯತ್ನ ನಡೆಯುತ್ತಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ದೇಶದಲ್ಲಿ ಅಶಾಂತಿ ವಾತಾವರಣ ತರಲು ಕುತಂತ್ರ ನಡೆಸುತ್ತಿದ್ದಾರೆ. ಹಲವಾರು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಾ ಕೋಮು ಗಲಭೆ ಸೃಷ್ಟಿಸುತ್ತಿದ್ದಾರೆ. ಬುದ್ದಿವಂತರಾದ ನಾವುಗಳು ಇದಕ್ಕೆ ಕಿವಿಗೊಡಬಾರದು. ನಾಗರಿಕ ಸಮಾಜದ ಪ್ರತಿಯೊಬ್ಬರೂ ಶಾಂತಿ ಕಾಪಾಡಲು ಪ್ರಯತ್ನಿಸಬೇಕು. ದುಷ್ಟ ಕ್ರಿಯೆಗಳನ್ನು ಮಾಡುವವರನ್ನು ತಕ್ಷ ಣ ಬಂಧಿಸಿ ಶಿಕ್ಷೆ ನೀಡಬೇಕು,'' ಎಂದು ಒತ್ತಾಯಿಸಿದರು.

ಕೊಡಗು ಜಿಲ್ಲಾ ರೋಮನ್‌ ಕ್ಯಾಥೋಲಿಕ್‌ ಅಸೋಸಿಯೇಷನ್‌ ಅಧ್ಯಕ್ಷ ಜೋಸೆಫ್‌ ಸ್ಯಾಮ್‌ ಮಾತನಾಡಿ, ''ಕ್ರೈಸ್ತ ಸಮುದಾಯದವರು ಸಮಾಜದ ಎಲ್ಲಾ ವರ್ಗದ ಜನರೊಂದಿಗೂ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ನಾವೆಲ್ಲರೂ ಒಂದೇ ಎಂಬ ತತ್ವವನ್ನು ಪಾಲಿಸುತ್ತಾ ಎಲ್ಲರೊಂದಿಗೂ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದೇವೆ. ಆರೋಪಿತ ವ್ಯಕ್ತಿ ಆತನ ಮನಸಿಗೆ ತೋಚಿದಂತೆ ಕೆಟ್ಟ ರೀತಿಯಲ್ಲಿ ಯೇಸು ಕ್ರಿಸ್ತರ ಬಗ್ಗೆ ಚಿತ್ರಗಳನ್ನು ಪ್ರಕಟಿಸಿದ್ದಾನೆ. ಈತನನ್ನು ಕೂಡಲೇ ಬಂಧಿಸಿ ಕ್ರೈಸ್ತರಿಗೆ ನ್ಯಾಯ ದೊರಕಿಸಿಕೊಡಬೇಕು,'' ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸ್ಥಾಪಕಾಧ್ಯಕ್ಷ ಫಾದರ್‌ ಲಾರೆನ್ಸ್‌, ಪ್ರಮುಖರಾದ ಫಾದರ್‌ ನವೀನ್‌ ಕುಮಾರ್‌, ತೆನ್ನಿ ಕುರಿಯಾನ, ಜೋನಸ್‌, ಮಸ್ಕರ್‌ ಇನ್ನೀಸ್‌ ಪಮ್ಮಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ