ಆ್ಯಪ್ನಗರ

ಕಾವೇರಿ ನದಿ ಪ್ರವಾಹದ ನಡುವೆಯೇ ಧ್ವಜಾರೋಹಣ

ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಸಮೀಪದ ಬರಡಿ ಗ್ರಾಮಸ್ಥರು ಪ್ರವಾಹದ ನಡುವೆಯೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನ ಆಚರಿಸಿದ್ದಾರೆ.

Vijaya Karnataka Web 15 Aug 2018, 5:04 pm
ಸಿದ್ದಾಪುರ: ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಸಮೀಪದ ಬರಡಿ ಗ್ರಾಮಸ್ಥರು ಪ್ರವಾಹದ ನಡುವೆಯೂ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನ ಆಚರಿಸಿದ್ದಾರೆ.
Vijaya Karnataka Web Madikeri flag hoisting in amidst of flood


ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರು ಒಗ್ಗೂಡಿ ಸ್ವಾತಂತ್ರ್ಯ ದಿನಾಚರಣೆ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆ ಹಿನ್ನೆಲೆ ಕಾವೇರಿ ನದಿ ನೀರು ಉಕ್ಕಿ ಹರಿಯುತ್ತಿದ್ದು ನದಿ ದಡದ ನಿವಾಸಿಗಳು ತೆಪ್ಪ ಬಳಸಿ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ.

ಬರಡಿ ಗ್ರಾಮ ವ್ಯಾಪ್ತಿಯಲ್ಲಿ ಕಾವೇರಿ ನದಿ ಪ್ರವಾಹಕ್ಕೆ ಹಲವು ಮನೆಗಳು ಜಲಾವೃತಗೊಂಡಿದೆ. ಮಕ್ಕಳನ್ನು ದೋಣಿಯಲ್ಲಿ ಸಾಗಿಸಿ ರಾಷ್ಟ್ರಗೀತೆ ಹಾಡುವ ಮೂಲಕ ಧ್ವಜಾರೋಹಣ ಮಾಡಿ ದೇಶಪ್ರೇಮ ಮೆರೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ