ಆ್ಯಪ್ನಗರ

ಕೊಡಗು: ಕೆಲ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದೆ ತೆರಳಿದ ಬಿಎಸ್‌ವೈ, ಸಂತ್ರಸ್ತರ ಆಕ್ರೋಶ

ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka Web 29 Aug 2019, 5:32 pm
ಕೊಡಗು: ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಕೆಲವು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಮೊಟಕುಗೊಳಿಸಿ ತೆರಳಿದ್ದಕ್ಕೆ ಸಂತ್ರಸ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web ಕುಂಬಾರಗುಂಡಿ ಗ್ರಾಮಸ್ಥರು
ಕುಂಬಾರಗುಂಡಿ ಗ್ರಾಮಸ್ಥರು


ಮುಖ್ಯಮಂತ್ರಿ ಬರುವಿಕೆಗಾಗಿ ಸೋಮವಾರ ಪೇಟೆಯ ಕುಂಬಾಗಗುಂಡಿ ಗ್ರಾಮಸ್ಥರು ಬೆಳಗ್ಗೆಯಿಂದ ಕಾದಿದ್ದರು.

ಮಧ್ಯಾಹ್ನದವರೆಗೂ ಮುಖ್ಯಮಂತ್ರಿ ಬಾರದಿದ್ದರಿಂದ ಸಂತ್ರಸ್ತರು ಆಕ್ರೋಶಗೊಂಡರು.

ಈ ಗ್ರಾಮದಲ್ಲಿ ಮಳೆಯಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದವು. ಆದರೆ ಗ್ರಾಮಸ್ಥರೇ 85 ಸಾವಿರ ರೂಪಾಯಿ ಹಣ ಸಂಗ್ರಹಿಸಿ ರಸ್ತೆ ರಿಪೇರಿ ಮಾಡಿಸಿಕೊಂಡಿದ್ದರು.

ಯಡಿಯೂರಪ್ಪ ಅವರಿಗೆ ಅಹವಾಲು ಸಲ್ಲಿಸಲು ಸಂತ್ರಸ್ತರು ಕಾದಿದ್ದರು. ಆದರೆ ಅದು ಕೊನೆಗೂ ಸಫಲವಾಗಲಿಲ್ಲ.

ಅಹವಾಲು ಸ್ವೀಕರಿಸಿದ ಬಿಎಸ್‌ವೈ

ಈ ನಡುವೆ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ ಯಡಿಯೂರಪ್ಪ, ಸೋಮವಾರಪೇಟೆ ತಾಲೂಕು ನೆಲ್ಯಹುದಿಕೇರಿಗೂ ಭೇಟಿ ನೀಡಿದರು.

ಅಹವಾಲು ಸ್ವೀಕರಿಸಿದ ಯಡಿಯೂರಪ್ಪ


ಸಂತ್ರಸ್ತರು ಈ ಸಂದರ್ಭದಲ್ಲಿ ಅಹವಾಲು ಸಲ್ಲಿಸಿದರು. ಮಳೆ, ಪ್ರವಾಹದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ತಾತ್ಕಾಲಿಕವಾಗಿ ಶೆಡ್‌ಗಳನ್ನು ನಿರ್ಮಿಸಲಾಗುವುದು. ನಂತರ ಶಾಶ್ವತ ಮನೆ ನಿರ್ಮಿಸಿಕೊಡಲಾಗುವುದು. ಶೆಡ್‌ ನಿರ್ಮಾಣಕ್ಕೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದು ಬಿಎಸ್‌ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ